ವಾರಣಾಸಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮಾತೆ ಅನ್ನಪೂರ್ಣ ದೇವಿಯ ಅಪರೂಪದ ವಿಗ್ರಹವನ್ನು ಪ್ರತಿಷ್ಠಾಪಿಸಿದರು. ಸುಮಾರು 100 ವರ್ಷಗಳ ಹಿಂದೆ ವಾರಣಾಸಿಯಿಂದ ಕಳವಾಗಿದ್ದ 18 ನೇ ಶತಮಾನದ ಈ ವಿಗ್ರಹವನ್ನು ಇತ್ತೀಚೆಗೆ ಕೆನಡಾದಿಂದ ವಾಪಾಸ್ ತರಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ, ವಿಗ್ರಹವನ್ನು ಭಾರತಕ್ಕೆ ಮರಳಿ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.
“108 ವರ್ಷಗಳ ನಂತರ ಮಾತೆ ಅನ್ನಪೂರ್ಣೆಯ ಮೂರ್ತಿ ಮತ್ತೊಮ್ಮೆ ಕಾಶಿಗೆ ಮರಳಿದೆ. ಈ ಕೀರ್ತಿ ಕಾಶಿ ಸಂಸದರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಕಾಶಿ ಮತ್ತು ರಾಜ್ಯದ ಪ್ರತಿಯೊಬ್ಬರ ಪರವಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
ನವೆಂಬರ್ 11 ರಂದು, ಉತ್ತರ ಪ್ರದೇಶ ಸರ್ಕಾರದ ಪ್ರತಿನಿಧಿಗಳು ಮಂತ್ರಗಳ ಪಠಣದ ನಡುವೆ ಧಾರ್ಮಿಕ ಸಮಾರಂಭದ ನಂತರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಪ್ರತಿಮೆಯನ್ನು ಸ್ವೀಕರಿಸಿದರು.
माँ अन्नपूर्णा की प्रतिमा पुनः अपने काशी धाम में 108 वर्षों के बाद देवोत्थान एकादशी के दिन विराजमान हुई है।
आज काशी में उत्सव जैसा माहौल है।
आप सभी को हृदय से बधाई एवं शुभकामनाएं! pic.twitter.com/rLp8OM2Uzp
— Yogi Adityanath (@myogiadityanath) November 15, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.