ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 400 ಕಿಲೋ ವ್ಯಾಟ್ನ 1 ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು 110 ಕಿಲೋ ವ್ಯಾಟ್ ಸಾಮಾರ್ಥ್ಯದ 5 ಒಟ್ಟು 6 ವಿದ್ಯುತ್ ವಿತರಣಾ ಕೇಂದ್ರಗಳನ್ನು ಕರ್ನಾಟಕ ಸರ್ಕಾರದ ಇಂಧನ ಇಲಾಖೆ ಅನುಮೋದನೆ ನೀಡಿದೆ.
ಲೋಕಾಪೂರದಲ್ಲಿ 400 ಕಿ.ವ್ಯಾ ಸಾಮಾರ್ಥ್ಯದ ವಿದ್ಯುತ್ ಸ್ವೀಕರಣಾ ಕೇಂದ್ರ ನಿರ್ಮಾಣವಾಗಲಿದ್ದು, ಹೆಬ್ಬಾಳ, ಮುಗಳಖೋಡ, ಮಾಚಕನೂರು, ಮಲ್ಲಾಪೂರ ಮತ್ತು ಮಂಟೂರು ಕ್ರಾಸ್ಗಳಲ್ಲಿ 110 ಕಿ.ವ್ಯಾ ಸಾಮಾರ್ಥ್ಯದ 5 ವಿದ್ಯುತ್ ವಿತರಣಾ ಕೇಂದ್ರಗಳು ಒಟ್ಟು 60.25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತದೆ.
400 ಕಿ.ವ್ಯಾ ಸಾಮಾರ್ಥ್ಯದ ಲೋಕಾಪೂರ ವಿದ್ಯುತ್ ಸ್ವೀಕರಣಾ ಕೇಂದ್ರವನ್ನು ರೂ.800 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 23 ವಿದ್ಯುತ್ ವಿತರಣಾ ಕೇಂದ್ರಗಳನ್ನು ಅನುಮೋದಿಸಲಾಗಿದ್ದು, ರೂ.1320 ಕೋಟಿ ವೆಚ್ಚದಲ್ಲಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಇಂಧನ ಇಲಾಖೆ ತಿಳಿಸಿದೆ.
ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಬಲಪಡಿಸಲು ಈ ವಿದ್ಯುತ್ ವಿತರಣಾ ಕೇಂದ್ರಗಳು ಮತ್ತು ಸ್ವೀಕರಣಾ ಕೇಂದ್ರಗಳು ಸಹಾಯ ಮಾಡುತ್ತವೆ. ಇದರಿಂದ ನನಗೆ ಹರ್ಷವಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಮುಧೋಳ ಶಾಸಕ ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ.
ಮುಧೋಳ ನಗರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಪೊಲೀಸ್ ವಸತಿ ಗೃಹಗಳ ಪುನರ್ ನಿರ್ಮಾಣ ಕಾರ್ಯವನ್ನು ರಾಜ್ಯ ಪೊಲೀಸ್ ವಸತಿ ನಿಗಮದಿಂದ ಕೈಗೆತ್ತಿಕೊಳ್ಳಲಾಗಿದೆ. 48 ಪೊಲೀಸ್ ವಸತಿ ಗೃಹಗಳನ್ನು ರೂ.15.00 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲಾಗುವುದೆಂದು ಪೊಲೀಸ್ ಇಲಾಖೆ ತಿಳಿಸಿದೆ. ಇದರಿಂದ ನನಗೆ ಹರ್ಷವಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಮುಧೋಳ ಶಾಸಕ ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.