ವಾರಣಾಸಿ: ಕಾಶಿಯ ಶ್ರೇಷ್ಠ ಪರಂಪರೆ ಮತ್ತು ಸಂಸ್ಕೃತಿ ವಿಶೇಷವಾಗಿ ಶತಮಾನಗಳಷ್ಟು ಹಳೆಯ ಗೋಸ್ವಾಮಿ ತುಳಸಿದಾಸ್, ಸಂತ ಕಬೀರ್, ಸಂತ ರೈದಾಸ್, ಮುನ್ಷಿ ಪ್ರೇಮಚಂದ್, ಶ್ರೀ ಜೈಶಂಕರ್ ಪ್ರಸಾದ್, ಭರತೇಂದು ಹರಿಶ್ಚಂದ್ರರಂತಹ ಮೇಧಾವಿಗಳ ವ್ಯಕ್ತಿತ್ವಗಳನ್ನು ಆಚರಿಸಲು ವಾರಣಾಸಿಯ ಇಂಟರ್ನ್ಯಾಷನಲ್ ಕೊಅಪರೇಶನ್ & ಕನ್ವೆನ್ಷನ್ ಸೆಂಟರ್ ನವೆಂಬರ್ 16 ರಿಂದ 18 ರವರೆಗೆ `ಕಾಶಿ ಉತ್ಸವʼವನ್ನು ಆಯೋಜಿಸಿದೆ.
“ವಾರಣಾಸಿಯ ಇಂಟರ್ನ್ಯಾಷನಲ್ ಕೊಅಪರೇಶನ್ & ಕನ್ವೆನ್ಷನ್ ಸೆಂಟರ್ ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ಪರವಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರ ಮತ್ತು ವಾರಣಾಸಿ ಆಡಳಿತದ ಬೆಂಬಲದೊಂದಿಗೆ `ಆಜಾದಿ ಕಾ ಅಮೃತ್ ಮಹೋತ್ಸವʼದ ಅಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ” ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಉತ್ಸವದ ಪ್ರತಿ ದಿನಕ್ಕೂ ಒಂದೊಂದು ಥೀಮ್ ಅನ್ನು ಮೀಸಲಿಡಲಾಗಿದೆ ಮತ್ತು ಅವುಗಳೆಂದರೆ- `ಕಾಶಿ ಕೆ ಹಸ್ತಾಕ್ಷರ್`; `ಕಬೀರ್, ರೈದಾಸ್ ಕಿ ಬನಿ ಔರ್ ನಿರ್ಗುನ್ ಕಾಶಿ` ಮತ್ತು `ಕವಿತಾ ಔರ್ ಕಹಾನಿ – ಕಾಶಿ ಕಿ ಜುಬಾನಿ`. ಮೊದಲ ದಿನವು ಖ್ಯಾತ ಸಾಹಿತಿಗಳಾದ ಭರತೇಂದು ಹರಿಶ್ಚಂದ್ರ ಮತ್ತು ಶ್ರೀ ಜೈಶಂಕರ್ ಪ್ರಸಾದ್ ಅವರ ಮೇಲೆ ಕೇಂದ್ರೀಕರಿಸುತ್ತದೆ.
ಎರಡನೇ ದಿನವು ಪ್ರಮುಖ ಕವಿಗಳಾದ ಸಂತ ರೈದಾಸ್ ಮತ್ತು ಸಂತ ಕಬೀರದಾಸ್ ಮೇಲೆ ಕೇಂದ್ರಿತವಾಗಿರಲಿದೆ ಮತ್ತು ಅಂತಿಮ ದಿನದಲ್ಲಿ ಗೋಸ್ವಾಮಿ ತುಳಸಿದಾಸ್ ಮತ್ತು ಮುನ್ಷಿ ಪ್ರೇಮಚಂದ್ ಕೇಂದ್ರಬಿಂದುಗಳಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮಗಳು ಪ್ಯಾನಲ್ ಚರ್ಚೆಗಳು, ಪ್ರದರ್ಶನಗಳು, ಚಲನಚಿತ್ರ ಪ್ರದರ್ಶನಗಳು, ಸಂಗೀತ, ನಾಟಕ ಮತ್ತು ನೃತ್ಯ ಪ್ರದರ್ಶನಗಳನ್ನು ಒಳಗೊಂಡಿರುತ್ತದೆ. ಇಲ್ಲಿ ಗಣ್ಯ ಕಲಾವಿದರು ಕಾರ್ಯಕ್ರಮ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.