ನವದೆಹಲಿ: ವಿಮಾನ ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರಿಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಹಾಗೂ ವೈದ್ಯರೂ ಆಗಿರುವ ಡಾ.ಭಾಗವತ್ ಕೃಷ್ಣರಾವ್ ಕರಾಡ್ ನೆರವಾಗಿದ್ದಾರೆ. ಕೇಂದ್ರ ಸಚಿವರ ಈ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ವಿಮಾನ ಪ್ರಯಾಣ ನಡೆಸುತ್ತಿದ್ದ ಪ್ರಯಾಣಿಕರೊಬ್ಬರು ರಕ್ತದೊತ್ತಡದ ಸಮಸ್ಯೆಯಿಂದಾಗಿ ತಲೆಸುತ್ತು ಬಂದು ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಚಿವರು ಶೀಘ್ರವೇ ಪ್ರಥಮ ಚಿಕಿತ್ಸೆಯನ್ನು ನೀಡಿ ರೋಗಿಗೆ ನೆರವಾಗಿದ್ದಾರೆ.
ಡಾ. ಭಾಗವತ್ ಕಾರ್ನಾಡ್ ಅವರು ಮಕ್ಕಳ ತಜ್ಞರಾಗಿದ್ದಾರೆ.
“ರಕ್ತದೊತ್ತಡ ಕಡಿಮೆಯಾಗಿ ತಲೆಸುತ್ತು ಬಂದು ವ್ಯಕ್ತಿ ಬಿದ್ದು ಬಿಟ್ಟಿದ್ದಾರೆ. ಅವರು ವಿಪರೀತ ಬೆವರುತ್ತಿದ್ದರು. ಹೀಗಾಗಿ ಅವರು ಧರಿಸಿದ ಬಟ್ಟೆಯನ್ನು ಸಡಿಲಗೊಳಿಸಿ ಎದೆಯ ಭಾಗವನ್ನು ಉಜ್ಜಿ ಕಾಲುಗಳನ್ನು ಮೇಲಕ್ಕೆ ಎತ್ತುವಂತೆ ಮಾಡಿದ ಬಳಿಕ ಗ್ಲೂಕೋಸ್ ನೀಡಲಾಯಿತು. 30 ನಿಮಿಷಗಳ ತರುವಾಯ ಅವರ ಆರೋಗ್ಯ ಸುಧಾರಣೆಯಾಯಿತು” ಎಂದು ಸಚಿವರು ಹೇಳಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಸಚಿವರ ಈ ಕಾರ್ಯವನ್ನು ಪ್ರಧಾನಿ ಮೋದಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
“ವೈದ್ಯರು ಸದಾ ಹೃದಯವಂತರಾಗಿರುತ್ತಾರೆ. ನನ್ನ ಸಹೋದ್ಯೋಗಿಯಿಂದ ಅತ್ಯುತ್ತಮ ನಡೆ” ಎಂದಿದ್ದಾರೆ.
ಸಚಿವರು ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.
A doctor at heart, always!
Great gesture by my colleague @DrBhagwatKarad. https://t.co/VJIr5WajMH
— Narendra Modi (@narendramodi) November 16, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.