ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ರಾಷ್ಟ್ರದ ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ 2021 ಅನ್ನು ಪ್ರದಾನ ಮಾಡಿದರು.
ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ವಾರಣಾಸಿ ಸ್ವಚ್ಛ ಗಂಗಾ ಪಟ್ಟಣ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಧ್ಯಪ್ರದೇಶದ ಇಂದೋರ್ಗೆ ದೇಶದ ಪ್ರಥಮ ಸ್ವಚ್ಛ ನಗರ ಪ್ರಶಸ್ತಿ ಪ್ರದಾನ ಮಾಡಿದರು. ಇಂದೋರ್ ಸತತ 5ನೇ ಬಾರಿಗೆ ಸ್ವಚ್ಛ ನಗರ ಪ್ರಶಸ್ತಿಯನ್ನು ಮುಡಿಗೇರಿಸುತ್ತಿದೆ
ಗುಜರಾತಿನ ಸೂರತ್ ಮತ್ತು ಆಂಧ್ರಪ್ರದೇಶದ ವಿಜಯವಾಡಕ್ಕೆ ಕ್ರಮವಾಗಿ ದೇಶದ ಎರಡನೇ ಮತ್ತು ಮೂರನೇ ಸ್ವಚ್ಛ ನಗರ ಪ್ರಶಸ್ತಿ ಪ್ರದಾನ ಮಾಡಿದರು.
ಛತ್ತೀಸ್ಗಢ ಭಾರತದ ಸ್ವಚ್ಛ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಪ್ರಕಟಿಸಿದ ಸಮೀಕ್ಷೆಯಲ್ಲಿ ವಾರಣಾಸಿಯನ್ನು “ಸ್ವಚ್ಛ ಗಂಗಾ ಪಟ್ಟಣ” ಎಂದು ಗುರುತಿಸಲಾಗಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸಂಬಂಧಿತ ಇಲಾಖೆಗಳನ್ನು ಶ್ಲಾಘಿಸಿ ಟ್ವಿಟ್ ಮಾಡಿದ್ದಾರೆ.
Indore is India’s cleanest city for the 5th year in a row.
Heartiest congratulations to the people, political leadership, Municipal Corporation, Swachhagrahis & Safaimitras for their exemplary commitment towards keeping the city on top. @rashtrapatibhvn @ChouhanShivraj pic.twitter.com/ShLcbXkGzc— Hardeep Singh Puri (@HardeepSPuri) November 20, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.