ಪಿಥೋರಗಢ: ಭಾರತವು ತನ್ನ ನೆರೆಯ ರಾಷ್ಟ್ರದೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತದೆ. ಆದರೆ ತನ್ನ ಒಂದಿಂಚು ಭೂಮಿಯನ್ನು ಆಕ್ರಮಿಸಲು ಪ್ರಯತ್ನಿಸುವ ಯಾವುದೇ ದೇಶಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಎಚ್ಚರಿಸಿದ್ದಾರೆ.
ಉತ್ತರಾಖಂಡದ ಪಿಥೋರಗಢ್ ಜಿಲ್ಲೆಯ ಝೌಲ್ಖೇತ್ ಮೂನಾಕೋಟ್ನಿಂದ ‘ಶಹೀದ್ ಸಮ್ಮಾನ್ ಯಾತ್ರೆ’ಯ ಎರಡನೇ ಹಂತವನ್ನು ಪ್ರಾರಂಭಿಸಿ ಅವರು ಮಾತನಾಡಿದರು.
“ನಮಗೆ ನಮ್ಮ ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಬೇಕು. ಭಾರತ ಯಾವತ್ತೂ ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ. ವಿದೇಶಿ ಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ. ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ಭಾರತದ ಸಂಸ್ಕೃತಿಯಾಗಿದೆ ಆದರೆ ಕೆಲವರಿಗೆ ಇದು ಅರ್ಥವಾಗುತ್ತಿಲ್ಲ. ಇದು ಅವರ ಅಭ್ಯಾಸವೋ ಅಥವಾ ಮನೋಧರ್ಮವೊ ಎಂಬುದು ನನಗೆ ಗೊತ್ತಿಲ್ಲ” ಎಂದು ಅವರು ಹೇಳಿದರು.
ಪಾಕಿಸ್ತಾನ ಭಯೋತ್ಪಾದಕ ಚಟುವಟಿಕೆಗಳ ಮೂಲಕ ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಲೇ ಇರುತ್ತದೆ ಮತ್ತು ಅದಕ್ಕೆ ಈಗಾಗಲೇ ಕಠಿಣ ಸಂದೇಶವನ್ನು ನೀಡಲಾಗಿದೆ ಎಂದು ಹೇಳಿದರು.
“ಪಶ್ಚಿಮ ಗಡಿಯಲ್ಲಿರುವ ನಮ್ಮ ನೆರೆಹೊರೆಯವರಿಗೆ ನಾವು ಸ್ಪಷ್ಟ ಸಂದೇಶವನ್ನು ನೀಡಿದ್ದೇವೆ, ಅದು ತನ್ನ ಮಿತಿಯನ್ನು ದಾಟಿದರೆ, ನಾವು ಗಡಿಯಲ್ಲಿ ಪ್ರತೀಕಾರ ಮಾತ್ರ ತೀರಿಸುವುದಿಲ್ಲ ಅದರ ಭೂಪ್ರದೇಶವನ್ನು ದಾಟಬಲ್ಲೆವು ಮತ್ತು ವಾಯುದಾಳಿಗಳನ್ನು ಮಾಡಬಲ್ಲೆವು” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.