ನವದೆಹಲಿ: ಜವಳಿ ಸಚಿವಾಲಯವು ಮಣಿಪುರದ ಮೊಯಿರಾಂಗ್ನಲ್ಲಿ ಕೈಮಗ್ಗ ಗ್ರಾಮವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಕೇಂದ್ರ ಜವಳಿ ಸಚಿವ ಪಿಯೂಷ್ ಗೋಯಲ್ ಘೋಷಿಸಿದ್ದಾರೆ.
ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ನಿನ್ನೆ ಇಂಫಾಲ್ಗೆ ಆಗಮಿಸಿದ ಕೇಂದ್ರ ಸಚಿವರು ಸಂಜೆ ಇಂಫಾಲ್ನಲ್ಲಿ ನಡೆದ ಕರಕುಶಲ ವಸ್ತುಗಳ ವಿಷಯಾಧಾರಿತ ಪ್ರದರ್ಶನ ಮತ್ತು ಪೆಹಚಾನ್ ಕಾರ್ಡ್ ವಿತರಣೆಯ ಉದ್ಘಾಟನಾ ಸಮಾರಂಭದಲ್ಲಿ ಕೈಮಗ್ಗ ಗ್ರಾಮವನ್ನು ಸ್ಥಾಪಿಸುವುದಾಗಿ ಘೋಷಿಸಿದರು.
ಸಮಾರಂಭದಲ್ಲಿ ಮಾತನಾಡಿದ ಪಿಯೂಷ್ ಗೋಯಲ್, ಭಾರತ ಸ್ವಾತಂತ್ರ್ಯದ 75 ನೇ ವರ್ಷದ ಸ್ಮರಣಾರ್ಥ ಭಾರತವು ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಮಣಿಪುರದ ಮೊಯಿರಾಂಗ್ ಭಾರತದ ಸ್ವಾತಂತ್ರ್ಯ ಚಳುವಳಿಯ ಇತಿಹಾಸದಲ್ಲಿ ಬಹಳ ಮುಖ್ಯವಾದ ಸ್ಥಳವಾಗಿದೆ. ನೇತಾಜಿ ಸುಭಾಸ್ ಚಂದ್ರ ನೇತೃತ್ವದ INA ಎರಡನೇ ಮಹಾಯುದ್ಧದ ಸಮಯದಲ್ಲಿ ತನ್ನ ಇಂಫಾಲ್ ಅಭಿಯಾನದಲ್ಲಿ ಮೊಯಿರಾಂಗ್ನಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿತ್ತು ಎಂದಿದ್ದಾರೆ.
ಮೊಯಿರಾಂಗ್ನಲ್ಲಿ ಐಎನ್ಎ ಮ್ಯೂಸಿಯಂ ಇದೆ ಮತ್ತು ಪ್ರಪಂಚದಾದ್ಯಂತದ ಪ್ರವಾಸಿಗರು ಮ್ಯೂಸಿಯಂಗೆ ಭೇಟಿ ನೀಡುತ್ತಾರೆ. ಮಣಿಪುರದ ಶ್ರೀಮಂತ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶಿಸಲು ಮತ್ತು ಪ್ರವಾಸಿಗರನ್ನು ಆಕರ್ಷಿಸಲು ಸಚಿವಾಲಯವು ಅಲ್ಲಿ ಕೈಮಗ್ಗ ಗ್ರಾಮವನ್ನು ಸ್ಥಾಪಿಸಲು ನಿರ್ಧರಿಸಿದೆ ಮತ್ತು ಅದರ ಕೆಲಸವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.