ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ತಮ್ಮ ಸರ್ಕಾರ ತೆಗೆದುಕೊಂಡಿರುವ ರಕ್ಷಣಾ ಮತ್ತು ಪರಿಹಾರ ಕ್ರಮಗಳ ಬಗ್ಗೆ ವಿವರ ನೀಡಿದರು. ವಿಶೇಷವಾಗಿ ಜೀವಹಾನಿ ಮತ್ತು ಬೆಳೆಹಾನಿಯ ಬಗ್ಗೆ ಪ್ರಧಾನಿ ಅವರು ಕಳಕಳಿ ವ್ಯಕ್ತಪಡಿಸಿ, ರಾಜ್ಯಕ್ಕೆ ಸಾಧ್ಯವಿರುವ ಸಹಕಾರ, ನೆರವು ನೀಡುವುದಾಗಿ ಭರವಸೆ ನೀಡಿದರು.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಹಾಸನ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಹಾನಿಗಳಾಗಿದ್ದು, ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ವಿವಿಧ ಭಾಗಗಳಲ್ಲಿ 24 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ ಭಾನುವಾರ ಸುರಿದ ಮಳೆಗೆ ಸುಮಾರು 191 ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿದ್ದು, ಹಲವಾರು ಮನೆಗಳು ನಾಶವಾಗಿವೆ.
ಈಗಾಗಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಲವು ಕಡೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ಪರಿಹಾರಕ್ಕೆ ಆದೇಶಿಸಿದ್ದಾರೆ. ಅಲ್ಲದೆ ಎಲ್ಲಾ ಸಚಿವರಿಗೂ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದಾರೆ.
ವಿಶೇಷವಾಗಿ ಜೀವಹಾನಿ ಮತ್ತು ಬೆಳೆಹಾನಿಯ ಬಗ್ಗೆ ಪ್ರಧಾನಮಂತ್ರಿಗಳು ಕಳಕಳಿ ವ್ಯಕ್ತಪಡಿಸಿ, ರಾಜ್ಯಕ್ಕೆ ಸಾಧ್ಯವಿರುವ ಸಹಕಾರ, ನೆರವು ನೀಡುವುದಾಗಿ ಭರವಸೆ ನೀಡಿದರು. (2/2)
— CM of Karnataka (@CMofKarnataka) November 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.