ನವದೆಹಲಿ : ಬಹು ವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿ ಉಪಕ್ರಮ (BIMSTEC) ನಾಯಕರನ್ನು 2022 ರ ಗಣರಾಜ್ಯೋತ್ಸವ ಸಮಾರಂಭಕ್ಕೆ ನವದೆಹಲಿಗೆ ಆಹ್ವಾನಿಸಲು ಕೇಂದ್ರ ಸರ್ಕಾರವು ಚಿಂತನೆ ನಡೆಸಿದೆ.
BIMSTEC ಭಾರತ ಸೇರಿದಂತೆ ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ಥೈಲ್ಯಾಂಡ್, ಮ್ಯಾನ್ಮಾರ್, ಭೂತಾನ್ ಅನ್ನು ಒಳಗೊಂಡಿದೆ.
2019 ರ ಲೋಕಸಭಾ ಚುನಾವಣೆಯ ನಂತರ BIMSTEC ನ ನಾಯಕರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಆದರೆ, 2019 ರ ನಂತರ ಕೆಲವು BIMSTEC ರಾಷ್ಟ್ರಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ ಮತ್ತು ಭಾರತ ಸರ್ಕಾರವು ಈ ದೇಶಗಳ ನಾಯಕರೊಂದಿಗೆ ಸಮನ್ವಯ ಸಾಧಿಸುತ್ತಿದೆ. 26 ನೇ ಜನವರಿ, 2022 ರಂದು ಅವರ ಲಭ್ಯತೆಯನ್ನು ಖಚಿತಪಡಿಸಲು ಕೇಂದ್ರ ಕಾರ್ಯನಿರತವಾಗಿದೆ ಎಂದು ತಿಳಿದುಬಂದಿದೆ.
ನಾಯಕರ ಲಭ್ಯತೆಯನ್ನು ದೃಢಪಡಿಸಿದ ನಂತರವೇ ಆಹ್ವಾನ ಪತ್ರವನ್ನು ಕಳುಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದರಿಂದ 2021 ರ ಭಾರತ ಗಣರಾಜ್ಯೋತ್ಸವ ಆಚರಣೆಗೆ ಯಾವುದೇ ಮುಖ್ಯ ಅತಿಥಿಗಳು ಬಂದಿರಲಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.