ಬೆಂಗಳೂರು : ಕರ್ನಾಟಕ ರಾಜ್ಯ ಬೀಜ ನಿಗಮ ತಳಿವರ್ಧಿತ ಬಿತ್ತನೆ ಬೀಜಗಳ ಜೊತೆಗೆ ರೈತರಿಗೆ ಲಾಭದಾಯಕವಾಗುವ ತರಕಾರಿ ಬೀಜಗಳನ್ನೂ ಉತ್ಪಾದಿಸಲಿ ಎಂದು ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ಹೆಬ್ಬಾಳದ ಕರ್ನಾಟಕ ಬೀಜ ನಿಗಮದಲ್ಲಿ ಬೀಜ ನಿಗಮದ ಅಧಿಕಾರಿಗಳು ಹಾಗೂ ಜಿಲ್ಲಾ ಉಪವ್ಯವಸ್ಥಾಪಕ ನಿರ್ದೇಶಕರೊಂದಿಗೆ ಬಿ.ಸಿ.ಪಾಟೀಲ್ ಸಭೆ ನಡೆಸಿದರು.
ರೈತರಿಗೆ ಗುಣಮಟ್ಟದ ಬಿತ್ತನೆಬೀಜ ಪೂರೈಸುವುದರ ಜೊತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಗುಣಮಟ್ಟದ ಬೀಜ ಉತ್ಪಾದನೆಯ ಲಾಭತರುವ ನಿಗಮವಾಗಬೇಕೆಂದು ಬೀಜ ನಿಗಮ ರೈತರಿಗೆ ಬರಿ ಬಿತ್ತನೆ ಬೀಜವನ್ನು ಪೂರೈಸುವ ಕೆಲಸವನ್ನಷ್ಟೇ ಮಾಡಬಾರದು. ಬೀಜ ನಿಗಮವು ತಳಿವರ್ಧಿತ ಬಿತ್ತನೆ ಬೀಜವನ್ನು ಉತ್ಪಾದಿಸುವ ಜೊತೆಗೆ ರೈತರಿಗೆ ಲಾಭ ತರುವ ಗುಣಮಟ್ಟದ ಬಿತ್ತನೆ ಬೀಜವನ್ನು ಸಹ ಉತ್ಪಾದಿಸುವ ನಿಗಮವಾಗಬೇಕು. ಆ ಮೂಲಕ ನಿಗಮ ದೇಶದಲ್ಲಿಯೇ ಲಾಭದಾಯಕ ನಿಗಮವಾಗಬೇಕು.
ರೈತರ ಹಿತದೃಷ್ಟಿಯಿಂದ ತರಕಾರಿ ಬಿತ್ತನೆ ಬೀಜಗಳನ್ನು ಸಹ ರಾಜ್ಯ ಬೀಜ ನಿಗಮ ಉತ್ಪಾದಿಸಿ ಮಾರಾಟ ಮಾಡಬೇಕು. ಇದಕ್ಕೆ ಅಗತ್ಯವಾದ ಕೌಶಲ್ಯ ತರಬೇತಿ ವೃತ್ತಿಪರತೆಯನ್ನು ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕರು ಹೊಂದಬೇಕು. ಆ ಮೂಲಕ ಕರ್ನಾಟಕ ತೈಲ ನಿಗಮದಂತೆ ಬೀಜ ನಿಗಮವು ಸಹ ಲಾಭದಾಯವಾಗಬೇಕೆಂದು ಬಿ.ಸಿ.ಪಾಟೀಲ್ ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.