ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವುದು ಮತ್ತು ಶಾಂತಿ ನೆಲೆಸುವಂತೆ ಮಾಡುವುದು ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ಈಶಾನ್ಯ ಭಾರತವನ್ನು ಸಬಲೀಕರಣಗೊಳಿಸುವ ಕುರಿತು ಭಾರತೀಯ ಚೇಂಬರ್ ಆಫ್ ಕಾಮರ್ಸ್ (ಐಸಿಸಿ) ನಲ್ಲಿ ಮಾತನಾಡಿದ ಶಾ, ಪ್ರಧಾನಿ ನರೇಂದ್ರ ಮೋದಿ ಅವರು 2014 ರ ನಂತರ ಈಶಾನ್ಯ ರಾಜ್ಯಗಳಿಗೆ 50 ಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದಾರೆ. ಈಶಾನ್ಯ ರಾಜ್ಯಗಳು ಮೂರು ಧ್ಯೇಯಗಳೊಂದಿಗೆ ಅಭಿವೃದ್ಧಿ ಹೊಂದುತ್ತವೆ. ಅದೆಂದರೆ ಅನುಭೂತಿ, ಸಬಲೀಕರಣ ಮತ್ತು ಸಕ್ರಿಯತೆ ಎಂದು ಹೇಳಿದ್ದಾರೆ.
ಈಶಾನ್ಯದಲ್ಲಿ ರಾಜಕೀಯ ಸ್ಥಿರತೆ ಮತ್ತು ಶಾಂತಿಯನ್ನು ಸ್ಥಾಪಿಸಲಾಗಿದೆ ಮತ್ತು ಈ ಪ್ರದೇಶದ ಎಲ್ಲಾ ರಾಜ್ಯ ಸರ್ಕಾರಗಳು ತಮ್ಮ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿವೆ ಎಂದು ಶಾ ಹೇಳಿದ್ದಾರೆ.
ಪ್ರತಿ ಕ್ಷೇತ್ರದಲ್ಲೂ ಶಾಂತಿಯುತವಾಗಿ ಚುನಾವಣೆ ನಡೆದಿದೆ ಎಂದ ಅವರು, ಈಶಾನ್ಯ ರಾಜ್ಯಗಳ ಎಲ್ಲಾ ರಾಜಧಾನಿ ನಗರಗಳು ವಾಯು ಸಂಪರ್ಕವನ್ನು ಹೊಂದಿವೆ ಮತ್ತು ಇಟಾನಗರದಲ್ಲಿ ಹೊಸ ವಿಮಾನ ನಿಲ್ದಾಣವು ಸ್ಥಾಪನೆಯಾಗಲಿದೆ. ಈಶಾನ್ಯ ಪ್ರದೇಶದಲ್ಲಿ ಹೂಡಿಕೆ ಮಾಡುವ ಸಮಯ ಬಂದಿದೆ, ಅಲ್ಲಿನ ಅಭಿವೃದ್ಧಿಗೆ ಉತ್ತೇಜನ ನೀಡಿ ಪ್ರದೇಶವನ್ನು ಸಬಲೀಕರಣಗೊಳಿಸಬೇಕು ಎಂದಿದ್ದಾರೆ.
ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈಶಾನ್ಯ ಪ್ರದೇಶದ ಮೇಲೆ ಸರ್ಕಾರ ಗಮನ ಕೇಂದ್ರೀಕರಿಸಿದೆ ಮತ್ತು ಇಂದು ಈ ಪ್ರದೇಶವು ದೇಶದ ಅಭಿವೃದ್ಧಿಯಲ್ಲಿ ಕೊಡುಗೆದಾರನ ಪಾತ್ರವನ್ನು ವಹಿಸಲು ಸಿದ್ಧವಾಗಿದೆ ಎಂದು ಶಾ ಹೇಳಿದರು.
ಸರ್ಕಾರವು ಈಶಾನ್ಯ ರಾಜ್ಯಗಳಲ್ಲಿ ಸಾವಯವ ಆಹಾರ ವ್ಯಾಪಾರವನ್ನು ಉತ್ತೇಜಿಸುತ್ತಿದೆ. ಮುಂದಿನ ದಿನಗಳಲ್ಲಿ ಈಶಾನ್ಯವು ಸಾವಯವ ಆಹಾರ ವ್ಯಾಪಾರಕ್ಕೆ ದೊಡ್ಡ ಕೇಂದ್ರವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಮುಂದಿನ ಒಂದು ಅಥವಾ ಎರಡು ವರ್ಷಗಳಲ್ಲಿ ಬಾಂಗ್ಲಾದೇಶವನ್ನು ಈಶಾನ್ಯ ರಾಜ್ಯಗಳಿಗೆ ರೈಲು ಮತ್ತು ರಸ್ತೆ ಮಾರ್ಗದೊಂದಿಗೆ ಸಂಪರ್ಕಿಸಲಾಗುವುದು, ಇದು ವ್ಯಾಪಾರವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.