ನವದೆಹಲಿ: ಹಲವಾರು ದೇಶಗಳಲ್ಲಿ ಮತ್ತು ವಿಶೇಷವಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು, ನವೆಂಬರ್ ತಿಂಗಳಿನಲ್ಲಿ ಕೆಲ ರಾಜ್ಯಗಳಲ್ಲಿ ಕೊರೊನಾವೈರಸ್ ಪರೀಕ್ಷಾ ಪ್ರಕರಣಗಳಲ್ಲಿ ಇಳಿಮುಖವಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಕೇರಳ ಸೇರಿದಂತೆ 13 ರಾಜ್ಯಗಳಿಗೆ ಪತ್ರ ಬರೆದು ಕೋವಿಡ್ ಪರೀಕ್ಷೆ ಕುಂಠಿತ ಗೊಂಡಿರುವ ಬಗ್ಗೆ ಕೇಂದ್ರ ಕಳವಳ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಪಂಜಾಬ್, ಕೇರಳ, ಮಹಾರಾಷ್ಟ್ರ, ಮಿಜೋರಾಂ, ಮಣಿಪುರ, ಜಮ್ಮು ಮತ್ತು ಕಾಶ್ಮೀರ, ಗೋವಾ, ನಾಗಾಲ್ಯಾಂಡ್, ರಾಜಸ್ಥಾನ, ಲಡಾಖ್, ಸಿಕ್ಕಿಂ ಮತ್ತು ಮೇಘಾಲಯಕ್ಕೆ ಪರೀಕ್ಷೆಯನ್ನು ಹೆಚ್ಚಿಸುವಂತೆ ಕೇಂದ್ರ ಪತ್ರ ಮುಖೇನ ಸೂಚನೆ ನೀಡಿದೆ.
ಹೆಚ್ಚಿನ ಸಂಖ್ಯೆಯ ಪಾಸಿಟಿವ್ ಪ್ರಕರಣಗಳ ಹೊರತಾಗಿಯೂ ಎಡಪಂಥೀಯರಿಂದ ಮಾದರಿ ರಾಜ್ಯವೆಂದು ಬಿಂಬಿಸಲ್ಪಟ್ಟ ಕೇರಳದಲ್ಲಿ ಆಗಸ್ಟ್ 15 ಕ್ಕೆ ಕೊನೆಗೊಂಡ ವಾರದಲ್ಲಿ ಸರಾಸರಿ ದೈನಂದಿನ ಪರೀಕ್ಷೆಗಳು 2.96 ಲಕ್ಷದಿಂದ ನವೆಂಬರ್ 22 ಕ್ಕೆ ಕೊನೆಗೊಂಡ ವಾರದಲ್ಲಿ 56071 ಕ್ಕೆ ಇಳಿದಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಷ್ಟ್ರೀಯ ಮಟ್ಟದಲ್ಲಿ ಹೊಸ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿದ್ದರೂ, ನವೆಂಬರ್ 22ಕ್ಕೆ ಕೊನೆಗೊಂಡ ವಾರದಲ್ಲಿ ಸರಾಸರಿ ಪ್ರಕರಣ 10,195 ಆಗಿದೆ. ಸಾಪ್ತಾಹಿಕ ಪರೀಕ್ಷಾ ಸಂಖ್ಯೆಯಲ್ಲೂ ಗಣನೀಯ ಇಳಿಕೆಯಾಗಿದೆ ಎಂದು ವರದಿಗಳು ತಿಳಿಸುತ್ತಿವೆ.
ಪರೀಕ್ಷಾ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವ ಬಗ್ಗೆ ಕೇಂದ್ರ ಸರಕಾರ ಕಳವಳ ವ್ಯಕ್ತಪಡಿಸಿದೆ. ಇದು ಕೊರೋನಾ ವಿರುದ್ಧದ ಭಾರತದ ಹೋರಾಟಕ್ಕೆ ಹಿನ್ನಡೆಯನ್ನು ತರುವ ಸಾಧ್ಯತೆ ಇದೆ ಎಂಬ ಆತಂಕ ಕೂಡ ವ್ಯಕ್ತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.