ನವದೆಹಲಿ: 26/11 ಮುಂಬಯಿ ದಾಳಿಗೆ ಇಂದಿಗೆ 13 ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಕರ್ತವ್ಯದ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಭದ್ರತಾ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.
“26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ನನ್ನ ಶ್ರದ್ಧಾಂಜಲಿಗಳು. ಕರ್ತವ್ಯದ ವೇಳೆ ತಮ್ಮ ಅಮೂಲ್ಯ ಪ್ರಾಣವನ್ನು ದೇಶಕ್ಕೆ ಅರ್ಪಿಸಿದ ಭದ್ರತಾ ಪಡೆಗಳ ಶೌರ್ಯ ಮತ್ತು ತ್ಯಾಗಕ್ಕೆ ರಾಷ್ಟ್ರವು ಯಾವಾಗಲೂ ಕೃತಜ್ಞರಾಗಿರಬೇಕು” ಎಂದು ಕೋವಿಂದ್ ಟ್ವೀಟ್ ಮಾಡಿದ್ದಾರೆ. .
ನವೆಂಬರ್ 26, 2008 ರಂದು ಪಾಕಿಸ್ಥಾನದ 10 ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಸಮುದ್ರ ಮಾರ್ಗವಾಗಿ ಮುಂಬೈಗೆ ಬಂದು ದುಷ್ಕೃತ್ಯ ಎಸಗಿದ್ದರು. 60 ಗಂಟೆಗಳ ಕಾಲ ಮುಂಬಯಿನ ತಾಜ್ ಹೋಟೆಲ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಗುಂಡು ಹಾರಿಸಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರನ್ನು ಹತ್ಯೆ ಮಾಡಿದ್ದರು ಮತ್ತು ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡರು.
ಈ ಕರಾಳ ದಿನದ ಸ್ಮರಣಾರ್ಥ ದಾಳಿಯಲ್ಲಿ ಹುತಾತ್ಮರಾದವರಿಗೆ ಇಂದು ಗೌರವ ನಮನಗಳನ್ನು ಸಲ್ಲಿಸಲಾಗಿದೆ.
My heartfelt tributes to the martyrs and homage to the victims of the 26/11 #MumbaiTerrorAttacks. The nation will always be grateful for the bravery and sacrifice of the security forces who laid down their lives in the line of duty.
— President of India (@rashtrapatibhvn) November 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.