ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂವಿಧಾನ ದಿನದಂದು ನಾಗರಿಕರಿಗೆ ಶುಭಾಶಯ ಕೋರಿದ್ದಾರೆ ಮತ್ತು ಸಂವಿಧಾನದ ಕರಡು ಅಂಗೀಕಾರದ ಪ್ರಸ್ತಾಪವನ್ನು ಮಂಡಿಸಿದ ಸಂವಿಧಾನ ಸಭೆಯಲ್ಲಿ ಬಿ ಆರ್ ಅಂಬೇಡ್ಕರ್ ಮಾಡಿದ ಭಾಷಣದ ಭಾಗವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
1949ರ ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಈ ದಿನವನ್ನು ಸಂವಿಧಾನ ದಿನವಾಗಿ ಆಚರಿಸಲಾಗುತ್ತದೆ. ಸಂವಿಧಾನ ದಿನವನ್ನು ಜಾರಿಗೆ ತಂದಿದ್ದು ಮೋದಿ ಸರ್ಕಾರ. ಸಂವಿಧಾನಕ್ಕೆ ಗೌರವ ಸೂಚಿಸುವ ಸಲುವಾಗಿ ಮೋದಿ ಸರ್ಕಾರ ಈ ನಿರ್ಧಾರ ಕೈಗೊಂಡಿತ್ತು.
ನವೆಂಬರ್ 26 ರಂದು ದೇಶಾದ್ಯಂತ ಸಂವಿಧಾನ ದಿನ ಆಚರಿಸುವಂತೆ 2015 ರ ನವೆಂಬರ್ 19ರಂದು ಭಾರತ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿತ್ತು. ಇದಕ್ಕೂ ಮೊದಲು 2015ರ ಅಕ್ಟೋಬರ್ 11ರಂದು ಪ್ರಧಾನಿ ನರೇಂದ್ರ ಮೋದಿ ಮುಂಬೈಯಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಸ್ಮಾರಕಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ನವೆಂಬರ್ 26ರಂದು ಸಂವಿಧಾನ ದಿನವಾಗಿ ಆಚರಿಸುವ ಘೋಷಣೆ ಮಾಡಿದ್ದರು.
ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಜೊತೆಗೆ ಅವರ ಸಾಧನೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ಸಂವಿಧಾನ ದಿನದ ಅಂಗವಾಗಿ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಸಂವಿಧಾನದ ಮಹತ್ವವನ್ನು ಬೋಧಿಸಲಾಗುತ್ತದೆ.
ಸಂವಿಧಾನ ದಿನದಂದು ನಮ್ಮ ನಾಗರಿಕರಿಗೆ ಶುಭಾಶಯಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
“ಸಂವಿಧಾನ ದಿನದಂದು ನಾಗರಿಕರಿಗೆ ಶುಭಾಶಯಗಳು. ಈ ವಿಶೇಷ ದಿನದಂದು ನವೆಂಬರ್ 4, 1948 ರಂದು ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್ ಅವರು ಮಾಡಿದ ಭಾಷಣದ ಭಾಗವನ್ನು ಹಂಚಿಕೊಳ್ಳುತ್ತಿದ್ದೇನೆ, ಇದರಲ್ಲಿ ಕರಡು ಸಮಿತಿಯು ಇತ್ಯರ್ಥಪಡಿಸಿದ ಕರಡು ಸಂವಿಧಾನದ ಅಂಗೀಕಾರದ ಪ್ರಸ್ತಾಪವನ್ನು ಮಂಡಿಸಲಾಯಿತು” ಎಂದಿದ್ದಾರೆ.
ಎಷ್ಟೇ ಸುಂದರ, ಸುಸಂಘಟಿತ ಮತ್ತು ಬಲಿಷ್ಠ ಸಂವಿಧಾನ ರಚನೆಯಾಗಿದ್ದರೂ, ಅದನ್ನು ದೇಶದ ನಿಜವಾದ, ನಿರ್ಭೀತ, ನಿಸ್ವಾರ್ಥ ಸೇವಕರು ಪಾಲಿಸದಿದ್ದರೆ ಅದರಿಂದ ಏನನ್ನೂ ಮಾಡಲು ಸಾಧ್ಯವಿಲ್ಲ ಎಂಬ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರ ಮಾತುಗಳನ್ನು ಮೋದಿ ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ. . ರಾಜೇಂದ್ರ ಪ್ರಸಾದ್ ಅವರ ಈ ಚೇತನ ಮಾರ್ಗದರ್ಶಕ ಮಾತು ಬೆಳಕಿನಂತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
कोई भी संविधान चाहे वह कितना ही सुंदर, सुव्यवस्थित और सुदृढ़ क्यों न बनाया गया हो, यदि उसे चलाने वाले देश के सच्चे, निस्पृह, निस्वार्थ सेवक न हों तो संविधान कुछ नहीं कर सकता। डॉ. राजेंद्र प्रसाद की यह भावना पथ-प्रदर्शक की तरह है। pic.twitter.com/UFpvSIpEXJ
— Narendra Modi (@narendramodi) November 26, 2021
Best wishes to our citizens on Constitution Day.
On this special day, sharing a part of Dr. Ambedkar’s speech
in the Constituent Assembly on 4th November 1948 in which he moved a motion for adoption of the Draft Constitution as settled by the Drafting Committee. pic.twitter.com/pviZNrKsGd— Narendra Modi (@narendramodi) November 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.