ನವದೆಹಲಿ: ಉತ್ತಮ ರಸ್ತೆಗಳಿಲ್ಲದೆ ಅಭಿವೃದ್ಧಿ ಅಸಾಧ್ಯ ಮತ್ತು ಈ ಕಾರಣಕ್ಕಾಗಿ ಕೇಂದ್ರವು ದೇಶದಲ್ಲಿ ಮೋಟಾರು ಮಾರ್ಗಗಳನ್ನು ಸುಧಾರಿಸುವತ್ತ ಗಮನಹರಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಲಾತೂರ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪಾರ್ಕ್ನಲ್ಲಿ 1,023 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ 19 ರಸ್ತೆ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು.
40,000 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹೊಸ ರಾಷ್ಟ್ರೀಯ ಹೆದ್ದಾರಿಯು ಪಶ್ಚಿಮ ಗುಜರಾತ್ನ ಸೂರತ್ ಅನ್ನು ದಕ್ಷಿಣ ಭಾರತಕ್ಕೆ ಸಂಪರ್ಕಿಸುತ್ತದೆ ಎಂದು ಅವರು ಹೇಳಿದರು.
ಈ ಹೆದ್ದಾರಿಯು ಮಹಾರಾಷ್ಟ್ರದ ನಾಸಿಕ್, ಅಹಮದ್ನಗರ ಮತ್ತು ಸೊಲ್ಲಾಪುರ ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದು, ಇದನ್ನು ಲಾತೂರ್ ಜಿಲ್ಲೆ ಮತ್ತು ರಾಜ್ಯದ ಮರಾಠವಾಡ ಪ್ರದೇಶದ ಇತರ ಕೆಲವು ಭಾಗಗಳಿಗೆ ಸಂಪರ್ಕಿಸಲು ಪ್ರಯತ್ನಿಸಲಾಗುವುದು ಎಂದಿದ್ದಾರೆ.
ಈ ಕಾರ್ಯಕ್ರಮವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಮಹಾರಾಷ್ಟ್ರ ಸರ್ಕಾರ ಆಯೋಜಿಸಿದೆ. “ಲಾತೂರ್ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಹೆದ್ದಾರಿಗಳು ನಿರ್ಮಾಣ ಹಂತದಲ್ಲಿವೆ. ಈ ಹೊಸ ರಸ್ತೆಗಳು ಯುವಕರ ಭವಿಷ್ಯವನ್ನು ರೂಪಿಸುತ್ತವೆ. ಅವು ಅನೇಕ ಯುವಕರಿಗೆ ಹೊಸ ಉದ್ಯೋಗಾವಕಾಶಗಳನ್ನು ಒದಗಿಸುತ್ತವೆ” ಎಂದು ಗಡ್ಕರಿ ಹೇಳಿದ್ದಾರೆ.
ಮೋದಿ ಸರಕಾರವು ರಸ್ತೆಗಳ ಸ್ಥಿತಿಯನ್ನು ಸುಧಾರಿಸುವತ್ತ ಗಮನ ಹರಿಸುತ್ತಿದೆ ಎಂದ ಗಡ್ಕರಿ, “ರಸ್ತೆಗಳಿಲ್ಲದೆ ಅಭಿವೃದ್ಧಿ ಅಸಾಧ್ಯ. ಅದಕ್ಕಾಗಿಯೇ ಮೊದಲಿನಿಂದಲೂ ರಸ್ತೆಗಳನ್ನು ಸುಧಾರಿಸುವತ್ತ ಗಮನ ಹರಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿ ಹಲವಾರು ರಸ್ತೆಗಳನ್ನು ನಿರ್ಮಿಸಲಾಗಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.