ನವದೆಹಲಿ: ಭಾರತದ ಶ್ವೇತ ಕ್ರಾಂತಿಯ ಪಿತಾಮಹ ಡಾ. ವರ್ಗೀಸ್ ಕುರಿಯನ್ ಅವರ ಜನ್ಮದಿನದ ನೆನಪಿಗಾಗಿ 2014 ರಿಂದ ಭಾರತವು ನವೆಂಬರ್ 26 ಅನ್ನು ರಾಷ್ಟ್ರೀಯ ಕ್ಷೀರ ದಿನವನ್ನಾಗಿ ಆಚರಿಸುತ್ತಾ ಬರುತ್ತಿದೆ.
ಈ ವರ್ಷವು ‘ಭಾರತದ ಕ್ಷೀರ ಮನುಷ್ಯ’ ಎಂದೂ ಕರೆಯಲ್ಪಡುವ ಡಾ. ಕುರಿಯನ್ ಅವರ ಜನ್ಮ ಶತಮಾನೋತ್ಸವ ವರ್ಷವಾಗಿದೆ, ಅವರು ಆಪರೇಷನ್ ಫ್ಲಡ್ ಎಂಬ ಪ್ರಪಂಚದ ಅತಿದೊಡ್ಡ ಕೃಷಿ ಕಾರ್ಯಕ್ರಮದ ರುವಾರಿಯಾಗಿದ್ದರು.
ಹಲವಾರು ರೈತರು ಮತ್ತು ಕಾರ್ಮಿಕರು ನಡೆಸುತ್ತಿರುವ ಹಲವಾರು ಸಂಸ್ಥೆಗಳನ್ನು ಸ್ಥಾಪಿಸುವುದರ ಜೊತೆಗೆ, ಡಾ.ಕುರಿಯನ್ ಅವರು ಜನಪ್ರಿಯ ಡೈರಿ ಬ್ರ್ಯಾಂಡ್ ಅಮುಲ್ ಸ್ಥಾಪನೆ ಮತ್ತು ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಭಾರತವು ವಿಶ್ವದ ಅತಿದೊಡ್ಡ ಹಾಲು ಉತ್ಪಾದಕನಾಗಿದ್ದು, ಜಾಗತಿಕ ಉತ್ಪಾದನೆಯ 22 ಪ್ರತಿಶತವನ್ನು ಹೊಂದಿದೆ, ನಂತರ ಅಮೇರಿಕಾ, ಚೀನಾ, ಪಾಕಿಸ್ತಾನ ಮತ್ತು ಬ್ರೆಜಿಲ್ ಸ್ಥಾನ ಪಡೆದುಕೊಂಡಿದೆ.
ಈ ವರ್ಷ, ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ, ಕೇಂದ್ರ ಸರ್ಕಾರವು ಆನಂದ್ನಲ್ಲಿರುವ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್ಡಿಡಿಬಿ) ಕ್ಯಾಂಪಸ್ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಗಳನ್ನು ವಿತರಿಸುವ ಮೂಲಕ ರಾಷ್ಟ್ರೀಯ ಹಾಲು ದಿನಾಚರಣೆಯನ್ನು ಆಚರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.