ನವದೆಹಲಿ : ಪ್ರತಿಪಕ್ಷಗಳ ಸಂಸದರ ಗದ್ದಲದ ನಡುವೆ ಲೋಕಸಭೆಯು ಸೋಮವಾರ ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ಅನ್ನು ಅಂಗೀಕರಿಸಿತು.
ಸದನದಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಸೂದೆಯನ್ನು ಸದನದಲ್ಲಿ ಚರ್ಚಿಸಬೇಕೆಂದು ಒತ್ತಾಯಿಸಿದರು.
ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ದತಿಗೆ ಕಾರಣಗಳನ್ನು ವಿವರಿಸಬೇಕು ಮತ್ತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ವಿರೋಧ ಪಕ್ಷಗಳು ವಾದಿಸುತ್ತಿವೆ.
ಬಹು ನಿರೀಕ್ಷಿತ ಚಳಿಗಾಲದ ಅಧಿವೇಶನದ ಮೊದಲ ದಿನವೇ ಗದ್ದಲ ಪ್ರಾರಂಭವಾಗಿದೆ, ಮೊದಲ ಗಂಟೆಯಲ್ಲಿ ಉಭಯ ಸದನಗಳು ಮುಂದೂಡಲ್ಪಟ್ಟವು. ಪ್ರಶ್ನೋತ್ತರ ವೇಳೆಯಲ್ಲಿ ಗದ್ದಲದ ನಂತರ ಲೋಕಸಭೆಯನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು, ರಾಜ್ಯಸಭೆಯನ್ನು ಕೂಡ ಸ್ವಲ್ಪ ಸಮಯ ಮುಂದೂಡಲಾಯಿತು.
ಲೋಕಸಭೆಯು 12 ಗಂಟೆಗಳ ನಂತರ ಇಂದು ಕಲಾಪವನ್ನು ಪುನರಾರಂಭಿಸಿದಾಗ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಪ್ರತಿಪಕ್ಷದ ಪೀಠದ ಸದಸ್ಯರ ಘೋಷಣೆಗಳ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಅನ್ನು ಮಂಡಿಸಿದರು.
ಹೊಸ ರದ್ದತಿ, ಮಸೂದೆಯನ್ನು ಅಂಗೀಕರಿಸಿದ ತಕ್ಷಣ, ಸಂಸತ್ತಿನ ಕೆಳಮನೆಯನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.