ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.)ದ ಅಂಗ ಸಂಸ್ಥೆ ಶ್ರೀರಾಮ ವಿದ್ಯಾಲಯ ನೆಲ್ಯಾಡಿ ಇದರ ದಶಮಾನೋತ್ಸವದ ನಿಮಿತ್ತ ನಿರ್ಮಿಸಿದ ನೂತನ ವಿದ್ಯಾಮಂದಿರ ‘ದಾಶರಥಿ’ಯ ಲೋಕಾರ್ಪಣೆ ಕಾರ್ಯಕ್ರಮ, ಶ್ರೀರಾಮ ಕ್ರೀಡಾಂಗಣ ಉದ್ಘಾಟನೆ, ಶೌಚಾಲಯ ಸಂಕೀರ್ಣಕ್ಕೆ ಭೂಮಿಪೂಜೆ ಕಾರ್ಯಕ್ರಮ ಡಿ. 8 ರಂದು ನೆಲ್ಯಾಡಿಯ ಸೂರ್ಯನಗರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದು, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದಾರೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ದ.ಕ. ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರಿನ ಶಾಸಕ ಸಂಜೀವ ಮಠಂದೂರು, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷೆ ಚೇತನಾ, ಶಂಕರ್ ಸಮೂಹ ಸಂಸ್ಥೆಗಳ ಚೆಯರ್ಮೆನ್ ಸತ್ಯಶಂಕರ ಕೆ., ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಳಿ, ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನ ವಿಶ್ರಾಂತ ಡೀನ್ ಡಾ| ಎಮ್. ನಾರಾಯಣ ಭಟ್, ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಡಾ| ಮುರಳೀಧರ ವೈ.ಕೆ., ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ನ ಡೆಪ್ಯುಟಿ ಜನರಲ್ ಮ್ಯಾನೇಜರ್ ರಾಜಾರಾಮ ಎಂ. ಶೆಟ್ಟಿ, ಹಿರಿಯ ಕೃಷಿಕ ನಟ್ಟಿ ಈಶ್ವರ ನಾಯಕ್ ಕುಳ್ಳಾಜೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಉಪಸ್ಥಿತರಿರಲಿದ್ದಾರೆ.
ಶಾಲೆಯ ಹಿನ್ನಲೆ
ಭಾರತದಲ್ಲಿ ಶಿಕ್ಷಣ ವ್ಯವಸ್ಥೆ ಇದೆ, ಆದರೆ ಶಿಕ್ಷಣದಲ್ಲಿ ಭಾರತೀಯತೆಯ ಇಲ್ಲ. ಆದ್ದರಿಂದ ಭಾರತೀಯತೆಯನ್ನೊಳಗೊಂಡ ಶಿಕ್ಷಣವನ್ನು ನೀಡುವ ದೃಷ್ಟಿಯಿಂದ ೨೦೦೯ರಲ್ಲಿ ಸ್ಥಾಪನೆಗೊಂಡ ಸಂಸ್ಥೆ ಶ್ರೀರಾಮ ವಿದ್ಯಾಲಯ. ಸಂಸ್ಕಾರಯುತ ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನದ ಧ್ಯೇಯವನ್ನಿಟ್ಟುಕೊಂಡು ಮಾತೃಭಾಷೆಯಲ್ಲೇ ಪರಿಣಾಮಕಾರಿಯಾದ ಶಿಕ್ಷಣವನ್ನು ನೀಡುವ ಕೈಂಕರ್ಯದಲ್ಲಿ ತೊಡಗಿಕೊಂಡ ಈ ವಿದ್ಯಾಲಯಕ್ಕೆ ಇಂದು ದಶಮಾನೋತ್ಸವದ ಸಂಭ್ರಮ. ವಿದ್ಯಾಲಯದ ದಶಮಾನೋತ್ಸವ ಸಂಭ್ರಮದ ಆಚರಣೆ ಸ್ವಂತ ಕಟ್ಟಡದ ಆಶ್ರಯದೊಂದಿಗೆ ಆಗಬೇಕು ಎಂಬ ಪೋಷಕರು ಮತ್ತು ಸಮಾಜ ಬಾಂಧವರ ಇಚ್ಛೆಯಂತೆ ನೂತನ ಕಟ್ಟಡದ ಲೋಕಾರ್ಪಣೆಯ ಜೊತೆಗೆ ವಿದ್ಯಾಲಯದ ದಶಮಾನೋತ್ಸವವನ್ನು ಸಂಭ್ರಮಿಸಲಾಗುತ್ತಿದೆ. ಪ್ರಸ್ತುತ ಶಿಶುಮಂದಿರದಿಂದ 10 ನೇ ತರಗತಿಯವರೆಗೆ 260 ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.