ನವದೆಹಲಿ : ಕೋವಿಡ್ -19 ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಭಾರತ ಮತ್ತು ರಷ್ಯಾ ನಡುವಿನ ಸಂಬಂಧದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಉಭಯ ದೇಶಗಳ ನಡುವಿನ ವಿಶೇಷ ಮತ್ತು ಪ್ರತಿಷ್ಠಿತ ಕಾರ್ಯತಂತ್ರದ ಪಾಲುದಾರಿಕೆಯು ಬಲಗೊಳ್ಳುತ್ತಲೇ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜೊತೆ ಸಭೆ ನಡೆಸಿದ ಸಂದರ್ಭದಲ್ಲಿ ಮೋದಿ ಈ ಮಾತುಗಳನ್ನು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ಥಾನ ಎರಡೂ ಅಫ್ಘಾನಿಸ್ಥಾನದ ಪರಿಸ್ಥಿತಿ ಮತ್ತು ಇತರ ವಿಷಯಗಳ ಬಗ್ಗೆ ನಿರಂತರವಾಗಿ ಮಾತುಕತೆ ನಡೆಸುತ್ತಿವೆ ಎಂದು ಅವರು ಹೇಳಿದರು.
“ಎರಡೂ ದೇಶಗಳು ಇತ್ತೀಚಿನ ದಿನಗಳಲ್ಲಿ ಹಲವು ಸವಾಲುಗಳನ್ನು ಎದುರಿಸಿವೆ. ನಾವು ಸಹಕಾರವನ್ನು ಮಾತ್ರವಲ್ಲದೆ ಪರಸ್ಪರರ ಸೂಕ್ಷ್ಮತೆಗಳನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ಕಳೆದ ಕೆಲವು ದಶಕಗಳಲ್ಲಿ, ಪ್ರಪಂಚವು ಅನೇಕ ಮೂಲಭೂತ ಬದಲಾವಣೆಗಳಿಗೆ ಸಾಕ್ಷಿಯಾಗಿದೆ ಮತ್ತು ವಿಭಿನ್ನ ರೀತಿಯ ಭೌಗೋಳಿಕ ರಾಜಕೀಯ ಸಮೀಕರಣಗಳು ಹೊರಹೊಮ್ಮಿವೆ, ಆದರೆ ಭಾರತ ಮತ್ತು ರಷ್ಯಾದ ಸ್ನೇಹವು ಸ್ಥಿರವಾಗಿದೆ” ಎಂದಿದ್ದಾರೆ.
“ಭಾರತ ಮತ್ತು ರಷ್ಯಾ ನಡುವಿನ ಸಂಬಂಧವು ಅಂತರರಾಜ್ಯ ಸ್ನೇಹದ ಅನನ್ಯ ಮತ್ತು ವಿಶ್ವಾಸಾರ್ಹ ಮಾದರಿಯಾಗಿದೆ” ಎಂದು ಪ್ರಧಾನಿ ಮೋದಿ ಸಭೆಯಲ್ಲಿ ಹೇಳಿದ್ದಾರೆ.
ಬಹು ನಿರೀಕ್ಷಿತ ಭಾರತ-ರಷ್ಯಾ ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ ವ್ಲಾಡಿಮಿರ್ ಪುಟಿನ್, “ನಾವು ಭಾರತವನ್ನು ಮಹಾನ್ ಶಕ್ತಿ, ಸ್ನೇಹಪರ ರಾಷ್ಟ್ರ ಮತ್ತು ಆಳ ಸ್ನೇಹಿತ ಎಂದು ನಂಬುತ್ತೇವೆ. ನಮ್ಮ ರಾಷ್ಟ್ರಗಳ ನಡುವಿನ ಸಂಬಂಧಗಳು ಬೆಳೆಯುತ್ತಿವೆ ಮತ್ತು ನಾನು ಭವಿಷ್ಯವನ್ನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
“ಪ್ರಸ್ತುತ, ಪರಸ್ಪರರ ಹೂಡಿಕೆಗಳು ಸುಮಾರು 38 ಬಿಲಿಯನ್ ಆಗಿದ್ದು, ರಷ್ಯಾದ ಕಡೆಯಿಂದ ಸ್ವಲ್ಪ ಹೆಚ್ಚು ಹೂಡಿಕೆ ಇದೆ. ಬೇರೆ ಯಾವುದೇ ದೇಶದಂತೆ ನಾವು ಮಿಲಿಟರಿ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಹೆಚ್ಚು ಸಹಕಾರ ಹೊಂದಿದ್ದೇವೆ. ನಾವು ಒಟ್ಟಾಗಿ ಉನ್ನತ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತೇವೆ ಮತ್ತು ಭಾರತದಲ್ಲಿ ಉತ್ಪಾದಿಸುತ್ತೇವೆ” ಎಂದು ರಷ್ಯಾದ ಅಧ್ಯಕ್ಷರು ಹೇಳಿದ್ದಾರೆ.
Добро пожаловать, г-н президент!
Welcome to India my friend President Putin. Our meeting today will strengthen our Special and Privileged Strategic Partnership. The initiatives that we take today will further increase the scope of our cooperation to new areas. @KremlinRussia pic.twitter.com/v699GK4BEM
— Narendra Modi (@narendramodi) December 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.