ನವದೆಹಲಿ: ವಿಮಾನ ನಿಲ್ದಾಣ ಪ್ರಾಧಿಕಾರ (AAI) ಮುಂದಿನ ಐದು ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ರೂಪಾಯಿಗಳನ್ನು ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ ವ್ಯಹಿಸಲಾಗುತ್ತದೆ ಎಂದು ತಿಳಿಸಿದೆ.
ಅಸ್ತಿತ್ವದಲ್ಲಿರುವ ಟರ್ಮಿನಲ್ಗಳ ವಿಸ್ತರಣೆ ಮತ್ತು ಮಾರ್ಪಾಡು, ಹೊಸ ಟರ್ಮಿನಲ್ಗಳ ನಿರ್ಮಾಣ, ಅಸ್ತಿತ್ವದಲ್ಲಿರುವ ರನ್ವೇಗಳನ್ನು ಬಲಪಡಿಸುವುದು, ಏರ್ಪೋರ್ಟ್ ನ್ಯಾವಿಗೇಷನ್ ಸೇವೆಗಳು, ಕಂಟ್ರೋಲ್ ಟವರ್ಗಳಿಗೆ ಈ ಹಣವನ್ನು ಖರ್ಚು ಮಾಡಲಾಗುತ್ತದೆ.
ನಿನ್ನೆ ರಾಜ್ಯಸಭೆಯಲ್ಲಿ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ವಿ ಕೆ ಸಿಂಗ್ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಅಡಿಯಲ್ಲಿ ದೇಶಾದ್ಯಂತ ಹೊಸ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ 36 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಯೋಜಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ದೆಹಲಿ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿರುವ ಮೂರು ಪಿಪಿಪಿ ವಿಮಾನ ನಿಲ್ದಾಣಗಳು 30 ಸಾವಿರ ಕೋಟಿ ರೂಪಾಯಿಗಳ ದೊಡ್ಡ ವಿಸ್ತರಣೆ ಯೋಜನೆಯನ್ನು ಕೈಗೆತ್ತಿಕೊಂಡಿವೆ ಎಂದು ಅವರು ಹೇಳಿದ್ದಾರೆ.
ದೇಶಾದ್ಯಂತ 21 ಗ್ರೀನ್ಫೀಲ್ಡ್ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲು ಸರ್ಕಾರವು ಅನುಮೋದನೆ ನೀಡಿದೆ ಎಂದಿದ್ದಾರೆ.
ಮಹಾರಾಷ್ಟ್ರದ ಶಿರಡಿ, ಪಶ್ಚಿಮ ಬಂಗಾಳದ ದುರ್ಗಾಪುರ, ಸಿಕ್ಕಿಂನ ಪಾಕ್ಯೊಂಗ್, ಕೇರಳದ ಕಣ್ಣೂರು, ಆಂಧ್ರಪ್ರದೇಶದ ಓರ್ವಕಲ್, ಕರ್ನಾಟಕದ ಕಲಬುರಗಿ, ಮಹಾರಾಷ್ಟ್ರದ ಸಿಂಧುದುರ್ಗ ಮತ್ತು ಉತ್ತರ ಪ್ರದೇಶದ ಕುಶಿನಗರದಲ್ಲಿ ಎಂಟು ಗ್ರೀನ್ಫೀಲ್ಡ್ ವಿಮಾನ ನಿಲ್ದಾಣಗಳು ಇಲ್ಲಿಯವರೆಗೆ ಕಾರ್ಯಾರಂಭ ಮಾಡಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.