ಬೆಂಗಳೂರು: ಇಂದಿನಿಂದ ದತ್ತಮಾಲಾ ಅಭಿಯಾನ ಆರಂಭಗೊಳ್ಳುತ್ತಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಇಂದು ಮಾಲೆ ಧಾರಣೆ ನಡೆಯಲಿದ್ದು, ಈ ಮೂಲಕ ದತ್ತಮಾಲಾ ಅಭಿಯಾನಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.
ಇಂದು ಕಾಮಧೇನು ಗಣಪತಿ ದೇವಸ್ಥಾನದಲ್ಲಿ ದತ್ತಮಾಲೆ ಧಾರಣೆ ನಡೆಯಲಿದೆ. ಇದರ ಪ್ರಯುಕ್ತ ಹೋಮ ಹವನಾದಿ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಮೂಲೆಮೂಲೆಯ ಭಕ್ತರು, ವಿಶ್ವ ಹಿಂದೂ ಪರಿಷದ್, ಭಜರಂಗ ದಳದ ಕಾರ್ಯಕರ್ತರು ಮಾಲೆ ಧಾರಣೆ ಮಾಡಲಿದ್ದಾರೆ.
ಡಿಸೆಂಬರ್ 19ರಂದು ದತ್ತ ಜಯಂತಿ ಕಾರ್ಯಕ್ರಮಗಳು ನಡೆಯಲಿದೆ. ಇದರಲ್ಲಿ ಸುಮಾರು 5000ಕ್ಕೂ ಅಧಿಕ ಮಾಲಾಧಾರಿಗಳು ಭಾಗವಹಿಸಲಿದ್ದಾರೆ. ಪೀಠದಲ್ಲಿ ಇರುಮುಡಿ ಸಮರ್ಪಿಸಿ, ಪಾದುಕೆಗಳ ದರ್ಶನ ಪಡೆದು ಗಣಪತಿ ಹೋಮ, ದತ್ತ ಹೋಮ ಮತ್ತು ಧಾರ್ಮಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದತ್ತಮಾಲಾ ಅಭಿಯಾನದಲ್ಲಿ ವಿವಿಧ ಸಾಧುಸಂತರು ಚುನಾಯಿತ ಪ್ರತಿನಿಧಿಗಳು ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ. ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.