ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ಅತೀ ಉದ್ದದ ಎಕ್ಸ್ಪ್ರೆಸ್ವೇ ಗಂಗಾ ಎಕ್ಸ್ಪ್ರೆಸ್ವೇಗೆ ಶಂಕುಸ್ಥಾಪನೆ ಮಾಡಿದರು. ದೇಶದಾದ್ಯಂತ ವೇಗದ ಸಂಪರ್ಕವನ್ನು ಒದಗಿಸುವ ಪ್ರಧಾನಮಂತ್ರಿಯವರ ದೂರದೃಷ್ಟಿಯು ಎಕ್ಸ್ಪ್ರೆಸ್ವೇಯ ಹಿಂದಿನ ಸ್ಫೂರ್ತಿಯಾಗಿದೆ.
594 ಕಿಮೀ ಉದ್ದದ ಆರು ಪಥಗಳ ಎಕ್ಸ್ಪ್ರೆಸ್ವೇಯನ್ನು 36,200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ಮೀರತ್ನ ಬಿಜೌಲಿ ಗ್ರಾಮದ ಬಳಿ ಪ್ರಾರಂಭವಾಗುವ ಎಕ್ಸ್ಪ್ರೆಸ್ವೇ ಪ್ರಯಾಗ್ರಾಜ್ನ ಜುದಾಪುರ್ ದಂಡು ಗ್ರಾಮದವರೆಗೆ ವಿಸ್ತರಿಸುತ್ತದೆ.
ಇದು ಮೀರತ್, ಹಾಪುರ್, ಬುಲಂದ್ಶಹರ್, ಅಮ್ರೋಹಾ, ಸಂಭಾಲ್, ಬುದೌನ್, ಶಹಜಹಾನ್ಪುರ, ಹರ್ದೋಯಿ, ಉನ್ನಾವೋ, ರಾಯ್ ಬರೇಲಿ, ಪ್ರತಾಪ್ಗಢ ಮತ್ತು ಪ್ರಯಾಗ್ರಾಜ್ ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ. ಕಾಮಗಾರಿ ಪೂರ್ಣಗೊಂಡ ನಂತರ, ಇದು ಉತ್ತರ ಪ್ರದೇಶದ ಅತಿ ಉದ್ದದ ಎಕ್ಸ್ಪ್ರೆಸ್ವೇ ಆಗಲಿದ್ದು, ರಾಜ್ಯದ ಪಶ್ಚಿಮ ಮತ್ತು ಪೂರ್ವ ಪ್ರದೇಶಗಳನ್ನು ಸಂಪರ್ಕಿಸುತ್ತದೆ.
ಶಹಜಹಾನ್ಪುರದ ಎಕ್ಸ್ಪ್ರೆಸ್ವೇನಲ್ಲಿ ತುರ್ತು ಟೇಕ್-ಆಫ್ ಮತ್ತು ಏರ್ ಫೋರ್ಸ್ ವಿಮಾನಗಳ ಲ್ಯಾಂಡಿಂಗ್ಗೆ ಸಹಾಯ ಮಾಡಲು 3.5 ಕಿಮೀ ಉದ್ದದ ಏರ್ಸ್ಟ್ರಿಪ್ ಅನ್ನು ಸಹ ನಿರ್ಮಿಸಲಾಗುತ್ತಿದೆ.
ಎಕ್ಸ್ ಪ್ರೆಸ್ ವೇ ಉದ್ದಕ್ಕೂ ಕೈಗಾರಿಕಾ ಕಾರಿಡಾರ್ ನಿರ್ಮಿಸಲು ಉದ್ದೇಶಿಸಲಾಗಿದೆ. ಎಕ್ಸ್ಪ್ರೆಸ್ವೇ ಕೈಗಾರಿಕಾ ಅಭಿವೃದ್ಧಿ, ವ್ಯಾಪಾರ, ಕೃಷಿ ಮತ್ತು ಪ್ರವಾಸೋದ್ಯಮ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಪೂರಕವಾಗಿದೆ. ಇದು ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ.
ಎಕ್ಸ್ಪ್ರೆಸ್ವೇಯಲ್ಲಿ ಏಳು ರೈಲ್ವೆ ಮೇಲ್ಸೇತುವೆ, 14 ದೊಡ್ಡ ಸೇತುವೆಗಳು, 126 ಸಣ್ಣ ಸೇತುವೆಗಳು, 375 ಅಂಡರ್ಪಾಸ್ಗಳು, 9 ಸಾರ್ವಜನಿಕ ಉಪಯುಕ್ತತೆ ಕೇಂದ್ರಗಳು, 2 ಟೋಲ್ ಪ್ಲಾಜಾ ಮತ್ತು 15 ರಾಂಪ್ ಟೋಲ್ ಪ್ಲಾಜಾವನ್ನು ಪ್ರಸ್ತಾಪಿಸಲಾಗಿದೆ. ಎಕ್ಸ್ಪ್ರೆಸ್ವೇಯಲ್ಲಿ 17 ಸ್ಥಳಗಳಲ್ಲಿ ಇಂಟರ್ಚೇಂಜ್ ಸೌಲಭ್ಯ ಲಭ್ಯವಿರುತ್ತದೆ. ಎಕ್ಸ್ಪ್ರೆಸ್ವೇಯ ಎರಡು ಬದಿಗಳಲ್ಲಿ 18.5 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗುವುದು, ಇದು ಹೆಚ್ಚು ಹಸಿರು ನೋಟವನ್ನು ನೀಡುತ್ತದೆ ಎಂದು ಮೂಲಗಳು ತಿಳಿಸಿವೆ.
ಎಕ್ಸ್ಪ್ರೆಸ್ವೇ ಕೃಷಿ ಮತ್ತು ಡೈರಿ ಫಾರ್ಮ್ ಉತ್ಪನ್ನಗಳ ಉತ್ತಮ ಸಾಗಣೆಗೆ ಸಹಾಯ ಮಾಡುತ್ತದೆ.
ರಾಜ್ಯ ಸರ್ಕಾರ ಈ ಮಹತ್ವಾಕಾಂಕ್ಷೆಯ ಯೋಜನೆಗೆ ತ್ವರಿತಗತಿಯಲ್ಲಿ ಕೆಲಸ ಮಾಡುತ್ತಿದೆ. ಎಕ್ಸ್ಪ್ರೆಸ್ವೇಗೆ ಅಗತ್ಯವಿರುವ 94 ಪ್ರತಿಶತದಷ್ಟು ಭೂಮಿಯನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಂಡಿದೆ ಮತ್ತು ಕೋವಿಡ್ ಸಾಂಕ್ರಾಮಿಕದ ಹೊರತಾಗಿಯೂ ದಾಖಲೆಯ ನಾಲ್ಕು ತಿಂಗಳ ಅವಧಿಯಲ್ಲಿ 90 ಪ್ರತಿಶತದಷ್ಟು ಭೂಮಿ ಖರೀದಿ ಪೂರ್ಣಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.