ನವದೆಹಲಿ: ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ದೇಶದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ದೇಶೀಕರಣಗೊಳಿಸಬೇಕೆಂದು ಕರೆ ನೀಡಿದ್ದಾರೆ.
ಅವರು ಇಂದು ವಿಜ್ಞಾನ ಭವನದಲ್ಲಿ ರಿಷಿಹುಡ್ ವಿಶ್ವವಿದ್ಯಾಲಯವನ್ನು ಉದ್ಘಾಟಿಸಿದರು. ಈ ವೇಳೆ ಶಿಕ್ಷಣ ತಜ್ಞರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ನಮ್ಮ ದೇಶವು ಶ್ರೀಮಂತ ಜ್ಞಾನ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಹೊಂದಿದೆ ಎಂದಿದ್ದಾರೆ.
ವಿಶ್ವದ ಜಿಡಿಪಿಯ ಶೇಕಡ 25ರಷ್ಟು ಕೊಡುಗೆ ನೀಡಿದ್ದ ಭಾರತದ ಹಿಂದಿನ ದಿನಗಳನ್ನು ನೆನಪಿಸಿಕೊಂಡ ಅವರು, ವಿದೇಶಿ ದೊರೆಗಳು ದೇಶದ ಸಂಪತ್ತನ್ನು ಮಾತ್ರ ನಾಶ ಮಾಡದೆ ಮನಸ್ಸುಗಳನ್ನೂ ಹಾಳು ಮಾಡಿದ್ದಾರೆ. ವಸಾಹತುಶಾಹಿಯು ದೇಶದ ಪ್ರಭಾವಿ ಜನರ ಮನಸ್ಸಿನ ಮೇಲೆ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲೆ ಪ್ರಭಾವ ಬೀರಿದೆ ಎಂದಿದ್ದಾರೆ.
ಗತ ವೈಭವ, ಶ್ರೀಮಂತಿಕೆ ಮತ್ತು ಸಂತೋಷದ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವಂತೆ ನಾಯ್ಡು ಸಾರ್ವಜನಿಕರಿಗೆ ಕರೆ ನೀಡಿದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಹೊಸ ಶಿಕ್ಷಣ ನೀತಿಯು ಶಿಕ್ಷಣ ವ್ಯವಸ್ಥೆಯ ಭಾರತೀಕರಣವನ್ನು ಪ್ರಾರಂಭಿಸಿದೆ ಎಂದರು ಮತ್ತು ಸರ್ಕಾರದ ಪ್ರಯತ್ನಗಳನ್ನು ಬಲಪಡಿಸಲು ಶಿಕ್ಷಣತಜ್ಞರು ಕೈಜೋಡಿಸುವಂತೆ ಮನವಿ ಮಾಡಿದರು.
ರಾಜ್ಯಸಭಾ ಸಂಸದ, ರಿಷಿಹುಡ್ ವಿಶ್ವವಿದ್ಯಾಲಯದ ಸಂಸ್ಥಾಪಕ ಮತ್ತು ಕುಲಪತಿ ಸುರೇಶ್ ಪ್ರಭು ಅವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.