ನವದೆಹಲಿ: ಭಾರತ ಮತ್ತು ಮಧ್ಯ ಏಷ್ಯಾ ರಾಷ್ಟ್ರಗಳು ಅಫ್ಘಾನಿಸ್ಥಾನದೊಂದಿಗೆ ಆಳವಾದ ಐತಿಹಾಸಿಕ ಮತ್ತು ನಾಗರಿಕ ಸಂಬಂಧಗಳನ್ನು ಹಂಚಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಇಂದು ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಮೂರನೇ ಭಾರತ-ಮಧ್ಯ ಏಷ್ಯಾ ಸಂವಾದದಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ಥಾನದ ಜನರಿಗೆ ಸಹಾಯ ಮಾಡುವ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.
ಅಫ್ಘಾನ್ನಲ್ಲಿ ನಿಜವಾದ ಅಂತರ್ಗತ ಮತ್ತು ಪ್ರತಿನಿಧಿ ಸರ್ಕಾರ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆ ವಿರುದ್ಧದ ಹೋರಾಟ, ಅಡೆತಡೆಯಿಲ್ಲದ ಮಾನವೀಯ ನೆರವು ಮತ್ತು ಮಹಿಳೆಯರು, ಮಕ್ಕಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಪಾಡುವುದು ಸೇರಿದಂತೆ ಅಫ್ಘಾನಿಸ್ಥಾನಕ್ಕೆ ಬೇಕಾದ ನೆರವುಗಳನ್ನು ಅವರು ಪಟ್ಟಿ ಮಾಡಿದರು.
ಭಾರತ-ಮಧ್ಯ ಏಷ್ಯಾ ಸಂವಾದ ವೇದಿಕೆಯು ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಸಂಬಂಧಗಳನ್ನು ಪರಿಶೀಲಿಸಲು ಒಂದು ಅವಕಾಶವಾಗಿದೆ. ಕೋವಿಡ್ -19 ರ ಎರಡನೇ ಅಲೆಯ ಸಮಯದಲ್ಲಿ, ವಿಶೇಷವಾಗಿ ಕಝಾಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ನಲ್ಲಿ ಅಂತರರಾಷ್ಟ್ರೀಯ ಸಮುದಾಯವು ಭಾರತಕ್ಕೆ ನೀಡಿದ ಬೆಂಬಲವನ್ನು ಅವರು ಶ್ಲಾಘಿಸಿದರು.
ಭಾರತವು ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಸೇರಿದಂತೆ 90 ಕ್ಕೂ ಹೆಚ್ಚು ದೇಶಗಳಿಗೆ ಲಸಿಕೆಗಳನ್ನು ಪೂರೈಸಿದೆ ಎಂದು ಅವರು ಹೇಳಿದರು. ಸೌಹಾರ್ದ ರಾಷ್ಟ್ರಗಳಿಗೆ ಲಸಿಕೆ ಕಾರ್ಯಕ್ರಮಗಳಿಗೆ ಸಹಾಯ ಮಾಡಲು ಭಾರತವು COWIN ವೇದಿಕೆಯನ್ನು ಸಹ ನೀಡಿದೆ ಎಂದರು.
ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಂವಾದದಲ್ಲಿ ಕಜಕಿಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ವಿದೇಶಾಂಗ ಸಚಿವರು ಭಾಗವಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.