ಶ್ರೀನಗರ: 20 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದ ಹೀರಾ ನಗರ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕೃಷಿ ಚಟುವಟಿಕೆ ಪುನರಾರಂಭಗೊಂಡಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಪಾಕಿಸ್ಥಾನದ ಕಡೆಯಿಂದ ಭಾರೀ ಗುಂಡಿನ ದಾಳಿ ನಡೆಯುತ್ತಿದ್ದ ಕಾರಣದಿಂದಾಗಿ ಇಲ್ಲಿ 20 ವರ್ಷಗಳ ಹಿಂದೆ ಕೃಷಿಯನ್ನು ಸ್ಥಗಿತಗೊಳಿಸಲಾಗಿತ್ತು. ಅಂದಿನಿಂದ 200 ಎಕರೆಗೂ ಹೆಚ್ಚು ಕೃಷಿಭೂಮಿ ಬರಡು ಬಿದ್ದಿತ್ತು.
ಬಿಎಸ್ಎಫ್ ಯೋಧರು ರೈತರಿಗೆ ಬೆಂಗಾವಲಾಗಿ ನಿಂತು ಅವರು ಭೂಮಿಯನ್ನು ಉಳುಮೆ ಮಾಡಿ ಬೀಜಗಳನ್ನು ಬಿತ್ತುವಂತೆ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರವನ್ನು ಸಹಜ ಸ್ಥಿತಿಗೆ ತರಲು ಕೇಂದ್ರ ಸರ್ಕಾರ ಹಲವು ಪ್ರಯತ್ನಗಳನ್ನು ಮಾಡಿದ್ದು, ಇದೀಗ ಅದು ಫಲಿತಾಂಶ ನೀಡಲು ಆರಂಭಿಸಿದೆ. ಆರ್ಟಿಕಲ್ 370 ರದ್ದಾದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಲ್ಲಿಯೂ ಇಳಿಮುಖವಾಗಿದೆ.
ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ತಡೆಯಲು ಕೇಂದ್ರ ಸರ್ಕಾರವು ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ತೆಗೆದುಕೊಂಡ ಕ್ರಮಗಳ ಪರಿಣಾಮಗಳು ಈಗ ಗೋಚರಿಸುತ್ತಿವೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.