ನವದೆಹಲಿ: ಪ್ರಸ್ತುತ ಸರ್ಕಾರದ 80% ಕಾರ್ಯಗಳು ಆನ್ಲೈನ್ನಲ್ಲೇ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ನವದೆಹಲಿಯಲ್ಲಿ ಉತ್ತಮ ಆಡಳಿತ ಸಪ್ತಾಹವನ್ನು ಉದ್ಘಾಟಿಸಿದ ಡಾ. ಜಿತೇಂದ್ರ ಸಿಂಗ್, ಡಿಜಿಟಲ್ ಇಂಡಿಯಾ ಉಪಕ್ರಮಕ್ಕೆ ಧನ್ಯವಾದಗಳು, ಕೋವಿಡ್ ಅವಧಿಯಲ್ಲಿಯೂ ಸಹ ಕೆಲಸಗಳು ಸುಗಮವಾಗಿ ನಡೆದಿವೆ ಎಂದು ಹೇಳಿದರು.
2014ರಲ್ಲಿ ಎರಡು ಲಕ್ಷದಷ್ಟಿದ್ದ ಸಾರ್ವಜನಿಕ ಕುಂದುಕೊರತೆಗಳು ಪ್ರಸ್ತುತ 25 ಲಕ್ಷಕ್ಕೂ ಹೆಚ್ಚಿದ್ದು, ಶೇ.95ಕ್ಕೂ ಹೆಚ್ಚು ಪ್ರಕರಣಗಳು ವಿಲೇವಾರಿಯಾಗಿದೆ ಎಂದರು.
ಉತ್ತಮ ಆಡಳಿತ ಸಪ್ತಾಹದ ಥೀಮ್ ‘ಪ್ರಶಾಸನ್ ಗಾಂವ್ ಕಿ ಔರ್’ ಆಗಿದ್ದು, ಸಾರ್ವಜನಿಕ ಕುಂದುಕೊರತೆಗಳ ಪರಿಹಾರಕ್ಕಾಗಿ ಮತ್ತು ಸೇವೆಯ ವಿತರಣೆಯನ್ನು ಸುಧಾರಿಸುವ ರಾಷ್ಟ್ರವ್ಯಾಪಿ ಅಭಿಯಾನವು ಎಲ್ಲಾ ಜಿಲ್ಲೆಗಳು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ವಾರಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ, 700 ಕ್ಕೂ ಹೆಚ್ಚು ಜಿಲ್ಲಾಧಿಕಾರಿಗಳು ತಹಸಿಲ್ ಮತ್ತು ಪಂಚಾಯತ್ ಸಮಿತಿಯ ಪ್ರಧಾನ ಕಚೇರಿಗಳಿಗೆ ಸಕಾಲಿಕ ಕುಂದುಕೊರತೆ ಪರಿಹಾರವನ್ನು ಒದಗಿಸಲು ಮತ್ತು ಸೇವೆಯ ವಿತರಣೆಯನ್ನು ಸುಧಾರಿಸಲು ಭೇಟಿ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.