ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಇಂದು ಒಡಿಶಾದ ಕರಾವಳಿಯ ಡಾ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಮೇಲ್ಮೈಯಿಂದ ಮೇಲ್ಮೈ ಕ್ಷಿಪಣಿ ಪ್ರಳಯ್ನ ಮೊದಲ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.
ಮಿಷನ್ ತನ್ನ ಎಲ್ಲಾ ಉದ್ದೇಶಗಳನ್ನು ಪೂರೈಸಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.
ಹೊಸ ಕ್ಷಿಪಣಿಯು ಅಪೇಕ್ಷಿತ ಅರೆ ಖಂಡಾಂತರ ಪಥವನ್ನು ಅನುಸರಿಸಿತು ಮತ್ತು ನಿಯಂತ್ರಣ, ಮಾರ್ಗದರ್ಶನ ಮತ್ತು ಮಿಷನ್ ಅಲ್ಗಾರಿದಮ್ಗಳನ್ನು ಮೌಲ್ಯೀಕರಿಸುವ ಉನ್ನತ ಮಟ್ಟದ ನಿಖರತೆಯೊಂದಿಗೆ ಗೊತ್ತುಪಡಿಸಿದ ಗುರಿಯನ್ನು ತಲುಪಿತು ಎಂದಿದೆ.
ಕ್ಷಿಪಣಿಯು ಘನ ಪ್ರೊಪೆಲ್ಲಂಟ್ ರಾಕೆಟ್ ಮೋಟಾರ್ ಮತ್ತು ಅನೇಕ ಹೊಸ ತಂತ್ರಜ್ಞಾನಗನ್ನು ಹೊಂದಿದ್ದು, ಇದು 150 ರಿಂದ 500 ಕಿಲೋಮೀಟರ್ ವ್ಯಾಪ್ತಿಯನ್ನು ಹೊಂದಿದೆ ಮತ್ತು ಇದನ್ನು ಮೊಬೈಲ್ ಲಾಂಚರ್ನಿಂದ ಉಡಾವಣೆ ಮಾಡಬಹುದಾಗಿದೆ.
ಈ ಚೊಚ್ಚಲ ಪ್ರಯೋಗಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಆರ್ಡಿಓ ಮತ್ತು ಸಂಬಂಧಿತ ತಂಡಗಳನ್ನು ಅಭಿನಂದಿಸಿದ್ದಾರೆ. ಆಧುನಿಕ ಮೇಲ್ಮೈಯಿಂದ ಮೇಲ್ಮೈಗೆ ಕ್ಷಿಪಣಿಯ ವೇಗದ ಅಭಿವೃದ್ಧಿ ಮತ್ತು ಯಶಸ್ವಿ ಉಡಾವಣೆಯಲ್ಲಿ ಡಿಆರ್ಡಿಓ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮತ್ತು ಡಿಆರ್ಡಿಒ ಅಧ್ಯಕ್ಷ ಡಾ ಜಿ ಸತೀಶ್ ರೆಡ್ಡಿ ಅವರು ಕೂಡ ತಂಡವನ್ನು ಶ್ಲಾಘಿಸಿದ್ದು, ಇದು ಹೊಸ ತಲೆಮಾರಿನ ಮೇಲ್ಮೈಯಿಂದ ಮೇಲ್ಮೈಗೆ ಕ್ಷಿಪಣಿಯಾಗಿದೆ. ಇದು ಆಧುನಿಕ ತಂತ್ರಜ್ಞಾನಗಳನ್ನು ಹೊಂದಿದ್ದು, ಈ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಅಳವಡಿಸುವುದರಿಂದ ಸಶಸ್ತ್ರ ಪಡೆಗಳಿಗೆ ಅಗತ್ಯವಾದ ಉತ್ತೇಜನವನ್ನು ನೀಡುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.