ನವದೆಹಲಿ: ಇಂದು ರಾಷ್ಟ್ರೀಯ ರೈತರ ದಿನ. ಭಾರತದ ಐದನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ ನೆನಪಿಗಾಗಿ ಪ್ರತಿ ವರ್ಷ ಡಿಸೆಂಬರ್ 23 ಅನ್ನು ರೈತರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಜೊತೆಗೆ, ಭಾರತೀಯ ರೈತರ ಕೊಡುಗೆಯನ್ನು ಗೌರವಿಸಲು ಮತ್ತು ದೇಶದಲ್ಲಿ ಅವರ ಪ್ರಾಮುಖ್ಯತೆಯನ್ನು ವೈಭವೀಕರಿಸಲು ದಿನವನ್ನು ಆಚರಿಸಲಾಗುತ್ತದೆ.
ರೈತರ ಉನ್ನತಿಗೆ ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಚೌಧರಿ ಚರಣ್ ಸಿಂಗ್ ಅವರ ಕೊಡುಗೆಯನ್ನು ಗುರುತಿಸಲು ಸರ್ಕಾರವು 2001 ರಲ್ಲಿ ಈ ದಿನವನ್ನು ರೈತ ದಿನವನ್ನಾಗಿ ಆಚರಿಸುವ ನಿರ್ಧಾರವನ್ನು ತೆಗೆದುಕೊಂಡಿತು.
ಚರಣ್ ಸಿಂಗ್ ಅವರು ತಮ್ಮ ಅಲ್ಪಾವಧಿಯ ಆಡಳಿತದಲ್ಲಿ ದೇಶದ ಕಾಯಕ ಯೋಗಿಗಳಾದ ರೈತರ ಬಗ್ಗೆಅತೀವ ಕಾಳಜಿ ವ್ಯಕ್ತಪಡಿಸುತ್ತಿದ್ದರು. ರೈತಾಪಿ ಜನರಿಗೋಸ್ಕರ ಅವರು ಬಹಳಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದರು. ಚೌಧರಿ ಚರಣ್ ಸಿಂಗ್ ಅವರ ಸ್ಮಾರಕವನ್ನು ‘ಕಿಸಾನ್ ಘಾಟ್’ ಎಂದೇ ಕರೆಯಲಾಗುತ್ತದೆ.
ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದಂದು ಅವರನ್ನು ಸ್ಮರಿಸಿದ್ದಾರೆ ಮತ್ತು ದೇಶವಾಸಿಗಳಿಗೆ ರೈತ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.