ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ‘ಸರ್ವರಿಗೂ ಉದ್ಯೋಗ’ ಮತ್ತು ಬೆಳಗಾವಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ್ದಾರೆ.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಈ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, “ಸ್ವಾಭಿಮಾನದ ವ್ಯಕ್ತಿತ್ವ ನಿರ್ಮಾಣಕ್ಕೆ ಅವಕಾಶವನ್ನು ಮಾಡಿಕೊಡಬೇಕು. ಕೌಶಲ್ಯ ಎಂದೆಂದಿಗೂ ಪ್ರಸ್ತುತವಾಗಿದೆ. ಡಿಸ್ಟಿಂಕ್ಷನ್ ಪಡೆದುಕೊಂಡಿರುವ ಎಂಜಿನಿಯರ್ಗಳು ಕೂಡ ನೇರವಾಗಿ ಗೆರೆ ಬರೆಯಲಾರರು. ಇದಕ್ಕೂ ಕೌಶಲ್ಯ ಬೇಕಾಗುತ್ತದೆ” ಎಂದರು.
“ರಾಜ್ಯದಲ್ಲಿ ನಾವು ಉದ್ಯೋಗ ನೀತಿ ರೂಪಿಸಿದ್ದೇವೆ. ಯಾವುದೇ ರಾಜ್ಯದಲ್ಲೂ ಇಂತಹ ನೀತಿಯಿಲ್ಲ. ಹೆಚ್ಚು ಉದ್ಯೋಗ ನೀಡಿದವರಿಗೆ ಹೆಚ್ಚಿನ ರಿಯಾಯಿತಿ ನೀಡಲಾಗುವುದು” ಎಂದಿದ್ದಾರೆ.
7,8 ನೇ ತರಗತಿಯಲ್ಲಿ ಅನುತ್ತೀರ್ಣರಾದವರಿಗೆ ಅವಕಾಶ ಸಿಗಬೇಕು. ಹಳ್ಳಿಗಳಲ್ಲಿ ಅಲ್ಪಾವಧಿ ತರಬೇತಿ ಕಾರ್ಯ ನಡೆಯಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.