ಬೆಂಗಳೂರು: ಮತಾಂತರ ನಿಯಂತ್ರಣ ಕಾಯ್ದೆಯನ್ನು ಜಾರಿಗೊಳಿಸುತ್ತಿರುವ ರಾಜ್ಯ ಸರಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಸಚಿವ ಸಂಪುಟವನ್ನು ಅಭಿನಂದಿಸಿದ್ದಾರೆ.
ಯಾವುದೇ ನಿಗದಿತ ಧರ್ಮವನ್ನು ಗುರಿಯಾಗಿಸಿ ಮಾಡಿದ ಕಾಯ್ದೆ ಇದಲ್ಲ. ಆದರೆ, ಆಮಿಷ, ಉಡುಗೊರೆ, ಒತ್ತಾಯಪೂರ್ವಕವಾಗಿ ಮತಾಂತರ ಮಾಡುವುದನ್ನು ಇದು ತಡೆಯಲಿದೆ. ಈ ಕಾಯ್ದೆಯಲ್ಲಿ ಯಾವುದೇ ನಿರ್ದಿಷ್ಟ ಸಮುದಾಯದ ಬಗ್ಗೆ ಉಲ್ಲೇಖ ಇಲ್ಲ ಎಂದು ತಿಳಿಸಿದ್ದಾರೆ.
ಧಾರ್ಮಿಕ ಸ್ವಾತಂತ್ರ್ಯ, ನಂಬಿಕೆ ಹಾಗೂ ಭಾವನೆಗೆ ಗೌರವ ಕೊಡುವ ಕಾಯ್ದೆ ಇದಾಗಿದೆ. ಈ ಕಾಯ್ದೆಯಡಿ ಧರ್ಮ ಪ್ರಚಾರಕ್ಕೆ ಅಡ್ಡಿ ಇಲ್ಲ. ಕಾಂಗ್ರೆಸ್ ಪಕ್ಷವು ಇದ್ಯಾವುದನ್ನೂ ಗಮನಿಸದೆ ವಿರೋಧಕ್ಕಾಗಿ ವಿರೋಧಿಸುವ ಪ್ರವೃತ್ತಿಯನ್ನು ತೋರಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ ಈ ಹಿಂದೆ ಮತಾಂತರ ನಿಯಂತ್ರಣ ಕಾಯ್ದೆ ಜಾರಿ ಬಗ್ಗೆ ಭರವಸೆ ನೀಡಿತ್ತು. ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರವು ಈಗ ಕಾಯ್ದೆ ಅನುಷ್ಠಾನಕ್ಕೆ ತರುತ್ತಿದ್ದು, ನುಡಿದಂತೆ ನಡೆವ ಸರಕಾರ ಎಂಬುದನ್ನು ಸಾಬೀತುಪಡಿಸಿದೆ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ.
ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ! ಹಲವು ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ ದೊರಕಿದೆ! ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸಚಿವ ಸಂಪುಟಕ್ಕೆ ಹಾರ್ದಿಕ ಅಭಿನಂದನೆಗಳು ಹಾಗೂ ಧನ್ಯವಾದಗಳು.#AntiConversionLaw pic.twitter.com/JBNGAV9VS4
— Nalinkumar Kateel (@nalinkateel) December 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.