ನವದೆಹಲಿ: ಇಂದು ಮಾಜಿ ಪ್ರಧಾನಿ ಮತ್ತು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 97 ನೇ ಜನ್ಮದಿನದ. ಈ ಹಿನ್ನೆಲೆಯಲ್ಲಿ ರಾಷ್ಟ್ರವು ಅವರಿಗೆ ಗೌರವ ಸಲ್ಲಿಸುತ್ತಿದೆ. ದೆಹಲಿಯಲ್ಲಿರುವ ಸದೈವ್ ಅಟಲ್ ಸ್ಮಾರಕಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸುತ್ತಿದ್ದಾರೆ.
ಈ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿಯೂ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಆಚರಿಸುತ್ತಿದೆ.
ವಾಜಪೇಯಿ ಅವರು ಹತ್ತು ಬಾರಿ ಲೋಕಸಭೆಗೆ ಮತ್ತು ಎರಡು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅವರು ಶ್ರೇಷ್ಠ ಸಂಸದೀಯ ಪಟುವಾಗಿದ್ದರು, ತಮ್ಮ ಅಧಿಕಾರವಧಿಯಲ್ಲಿ ಜನರ ನಂಬಿಕೆ, ಪ್ರೀತಿಗೆ ಪಾತ್ರರಾಗಿ ಇಂದಿಗೂ ನೆನಪಿನಲ್ಲಿ ಉಳಿದುಕೊಂಡಿದ್ದಾರೆ.
ಸಂಸದರಾಗಿ ಮತ್ತು ವಿಶೇಷವಾಗಿ ಪ್ರಧಾನ ಮಂತ್ರಿಯಾಗಿ ಅವರು ದೇಶಕ್ಕೆ ಅಸಂಖ್ಯಾತ ಪ್ರಮುಖ ಕೊಡುಗೆಗಳನ್ನು ನೀಡಿದ್ದು, ಇದು ದಿಟ್ಟ ಸುಧಾರಣೆಗಳು ಮತ್ತು ಮೂಲಸೌಕರ್ಯಗಳ ತ್ವರಿತ ಅಭಿವೃದ್ಧಿಯ ಮೂಲಕ ಬಲವಾದ ಆರ್ಥಿಕತೆಗೆ ದಾರಿ ಮಾಡಿಕೊಟ್ಟಿತು.
ಪ್ರಧಾನಿ ನರೇಂದ್ರ ಮೋದಿಯವರು ಇಂದು ಟ್ವಿಟ್ ಮಾಡಿ ಮಾಜಿ ಪ್ರಧಾನಿಗೆ ತಮ್ಮ ಗೌರವ ಸಲ್ಲಿಸಿದ್ದಾರೆ.
आदरणीय अटल जी को उनकी जयंती पर कोटि-कोटि नमन।
Remembering Atal Ji on his Jayanti. We are inspired by his rich service to the nation. He devoted his life towards making India strong and developed.
His development initiatives positively impacted millions of Indians.
— Narendra Modi (@narendramodi) December 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.