ನವದೆಹಲಿ: ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದಾರೆ. ಮೋದಿ ಸರಕಾರ ಅಧಿಕಾರಕ್ಕೆ ಬಂದಿರುವುದು ಸರಕಾರ ನಡೆಸುವ ಉದ್ದೇಶದಿಂದಲ್ಲ, ದೇಶವನ್ನು ಪರಿವರ್ತಿಸುವ ಉದ್ದೇಶದಿಂದ ಎಂದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಉತ್ತಮ ಆಡಳಿತ ದಿನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾ, ಉತ್ತಮ ಆಡಳಿತವು ಪಾರದರ್ಶಕ ಸರ್ಕಾರವನ್ನು ಸೂಚಿಸುತ್ತದೆ, ಎಲ್ಲರನ್ನೂ ಒಳಗೊಂಡಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಸಮಗ್ರ ಬೆಳವಣಿಗೆಯ ದೃಷ್ಟಿಯನ್ನು ಹೊಂದಿದೆ. ಈ ದೂರದೃಷ್ಟಿಯೊಂದಿಗೆ ಮೋದಿ ಸರ್ಕಾರವು ದೇಶದಲ್ಲಿ ಪರಿವರ್ತನೆ ತರುವ ಹಾದಿಯಲ್ಲಿ ಮುನ್ನಡೆಯುತ್ತಿದೆ, ಜನರ ಆಶೋತ್ತರಗಳನ್ನು ಈಡೇರಿಸುವ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಹೊಂದುತ್ತಿವೆ ಎಂದಿದ್ದಾರೆ.
ನೀತಿ ಮತ್ತು ಆಡಳಿತದ ರಚನೆಯಲ್ಲಿ ತಂತ್ರಜ್ಞಾನದ ಬಳಕೆಯಿಂದ ಮಾತ್ರ ಉತ್ತಮ ಆಡಳಿತ ಬರಲು ಸಾಧ್ಯ ಎಂದು ಶಾ ಒತ್ತಿ ಹೇಳಿದರು. ನಾಗರಿಕರು ಎದುರಿಸಬೇಕಾದ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ, ಇಡೀ ಸಮಸ್ಯೆಯನ್ನು ಮೂಲದಿಂದ ಕಿತ್ತೊಗೆಯುವ ರೀತಿಯಲ್ಲಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಸರಕಾರ ಎರಡು ಕೋಟಿಗೂ ಹೆಚ್ಚು ಜನರಿಗೆ ಮನೆ ನೀಡಿದ್ದು, ಪ್ರತಿ ಮನೆಗೆ ವಿದ್ಯುತ್, ಶೌಚಾಲಯ ಕಲ್ಪಿಸುವ ಕೆಲಸ ಮುಗಿದಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಜಿತೇಂದ್ರ ಸಿಂಗ್, ಸರ್ಕಾರದ ಶೇ.80ಕ್ಕೂ ಹೆಚ್ಚು ಕೆಲಸಗಳು ಆನ್ಲೈನ್ನಲ್ಲಿ ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಕನಿಷ್ಠ ಸರ್ಕಾರ-ಗರಿಷ್ಠ ಆಡಳಿತ ವಿಧಾನದೊಂದಿಗೆ ಮಾದರಿ ಬದಲಾವಣೆ ತಂದಿದ್ದಾರೆ. 2014ರಲ್ಲಿ ಎರಡು ಲಕ್ಷದಷ್ಟಿದ್ದ ಸಾರ್ವಜನಿಕ ಕುಂದುಕೊರತೆಗಳು ಪ್ರಸ್ತುತ 25 ಲಕ್ಷಕ್ಕೂ ಹೆಚ್ಚಿದ್ದು, ಶೇ.95ಕ್ಕೂ ಹೆಚ್ಚು ಪ್ರಕರಣಗಳ ವಿಲೇವಾರಿಯಾಗಿದೆ ಎಂದಿದ್ದಾರೆ.
ಮುಂದಿನ ವರ್ಷದಿಂದ ದೇಶಾದ್ಯಂತ ಸಾಮಾನ್ಯ ಅರ್ಹತಾ ಪರೀಕ್ಷೆ ನಡೆಸಲಾಗುವುದು ಎಂದು ಡಾ.ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಯುವ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿಯನ್ನು ಸುಲಭಗೊಳಿಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆ ಪರೀಕ್ಷೆಯನ್ನು ನಡೆಸಲಿದೆ ಎಂದು ಅವರು ಹೇಳಿದರು.
ದೇಶದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಪರೀಕ್ಷಾ ಕೇಂದ್ರವನ್ನು ಹೊಂದಿದ್ದು, ಇದು ದೂರದ ಪ್ರದೇಶಗಳಲ್ಲಿ ವಾಸಿಸುವ ಅಭ್ಯರ್ಥಿಗಳಿಗೆ ಪ್ರವೇಶವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.