ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಮಂಡಿಯಲ್ಲಿ ಧೌಲಾ ಸಿಧ್ ಜಲವಿದ್ಯುತ್ ಮತ್ತು ರೇಣುಕಾಜಿ ಅಣೆಕಟ್ಟು ಯೋಜನೆಗಳು ಸೇರಿದಂತೆ 11,000 ಕೋಟಿ ರೂಪಾಯಿಗಳ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಹಿಮಾಚಲ ಪ್ರದೇಶವು ತನ್ನ ಜೀವನ ಪಯಣವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು. ಹಿಮಾಚಲ ಸರ್ಕಾರವು ನಾಲ್ಕು ವರ್ಷಗಳ ಸೇವೆ ಮತ್ತು ಸಿದ್ಧಿಯನ್ನು ಪೂರ್ಣಗೊಳಿಸಿದ ಭಾಗವಾಗಿರುವುದಕ್ಕಾಗಿ ಅವರು ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.
ಹಿಮಾಚಲ ಪ್ರದೇಶದ ಜನರ ಬದುಕನ್ನು ಬದಲಾಯಿಸಲು ಕೇಂದ್ರ ಮತ್ತು ರಾಜ್ಯದ ಸರ್ಕಾರವು ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಮೋದಿ ಹೇಳಿದರು. ಕೋವಿಡ್-19 ವಿರುದ್ಧ ಹೋರಾಡಿದ್ದಕ್ಕಾಗಿ ಮಾತ್ರವಲ್ಲದೆ ಅಭಿವೃದ್ಧಿಯ ವೇಗವನ್ನು ಯಶಸ್ವಿಯಾಗಿ ಕಾಯ್ದುಕೊಂಡಿದ್ದಕ್ಕಾಗಿ ಹಿಮಾಚಲದ ಎಲ್ಲ ಜನರನ್ನು ಪ್ರಧಾನಮಂತ್ರಿ ಶ್ಲಾಘಿಸಿದರು. ಭಾರತವು 2030 ರ ವೇಳೆಗೆ ಪಳೆಯುಳಿಕೆ ರಹಿತ ಇಂಧನ ಮೂಲಗಳಿಂದ ಸ್ಥಾಪಿಸಲಾದ ವಿದ್ಯುತ್ ಸಾಮರ್ಥ್ಯದ ಶೇಕಡಾ 40 ರಷ್ಟು ಪೂರೈಸಲು 2016 ರಲ್ಲಿ ಗುರಿಯನ್ನು ಹೊಂದಿತ್ತು ಮತ್ತು ಇಂದು ಭಾರತವು ಈ ವರ್ಷದ ನವೆಂಬರ್ನಲ್ಲಿ ಈ ಗುರಿಯನ್ನು ಸಾಧಿಸಿದೆ ಎಂದು ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದಿದ್ದಾರೆ..
ಹಿಂದಿನ ಸರ್ಕಾರಗಳು ಹಿಮಾಚಲ ಪ್ರದೇಶದಲ್ಲಿ 7,00,000 ಲಕ್ಷ ನೀರಿನ ಸಂಪರ್ಕಗಳನ್ನು ಒದಗಿಸಿದ್ದವು, ಆದರೆ ಎರಡು ವರ್ಷಗಳಲ್ಲಿ 7,00,000 ನೀರಿನ ಸಂಪರ್ಕಗಳನ್ನು ನೀಡಲಾಯಿತು, ಅದೂ ಸಹ ಕೋವಿಡ್-19 ನಡುವೆ ಎಂದರು.
ಸರ್ಕಾರದ ಏಕೈಕ ಬದ್ಧತೆಯು ಅಭಿವೃದ್ಧಿ ಎಂದು ಪ್ರಧಾನಿ ಹೇಳಿದರು. ಅಟಲ್ ಸುರಂಗದ ಕೆಲಸ ಪೂರ್ಣಗೊಂಡಿದೆ ಮತ್ತು ಚಂಡೀಗಢದಿಂದ ಮನಾಲಿ ಮತ್ತು ಶಿಮ್ಲಾಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು.
ಸಮಾರಂಭದಲ್ಲಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಏಮ್ಸ್, PGI ಮತ್ತು ಅನೇಕ ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ಠಾಕೂರ್ ಅವರು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರನ್ನು ನಾಲ್ಕು ವರ್ಷಗಳ ಸರ್ಕಾರವನ್ನು ಪೂರ್ಣಗೊಳಿಸಿದಕ್ಕಾಗಿ ಅಭಿನಂದಿಸಿದರು.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮಾತನಾಡಿ, ಮಂಡಿಯನ್ನು ಛೋಟಿ ಕಾಶಿ ಎಂದು ಕರೆಯಲಾಗುತ್ತದೆ, ಏಕೆಂದರೆ 300 ಕ್ಕೂ ಹೆಚ್ಚು ಪ್ರಾಚೀನ ದೇವಾಲಯಗಳಿವೆ. ಯುಪಿಯ ಕಾಶಿಯಂತೆಯೇ ಮಂಡಿಯನ್ನು ಅಭಿವೃದ್ಧಿಪಡಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ನರೇಂದ್ರ ಮೋದಿಯವರು 2020 ರಲ್ಲಿ ರೋಹ್ಟಾಂಗ್ನ ಅಟಲ್ ಸುರಂಗವನ್ನು ಉದ್ಘಾಟಿಸಿದರು ಮತ್ತು ಈ ಸುರಂಗವು ಸ್ಥಳೀಯರಿಗೆ ಸಹಾಯ ಮಾಡುವುದಲ್ಲದೆ ರಾಜ್ಯಕ್ಕೆ ಅನೇಕ ಪ್ರವಾಸಿಗರನ್ನು ಆಕರ್ಷಿಸಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.