ನವದೆಹಲಿ: ದೇಶ ಎದುರಿಸುತ್ತಿರುವ ಹಲವಾರು ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿರುವ ಆತ್ಮನಿರ್ಭರ ಭಾರತವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ದೇಶದ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.
ಇಂದು ಕಾನ್ಪುರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 54ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ದೇಶವು ವಿದ್ಯಾರ್ಥಿಗಳು ಮತ್ತು ಐಐಟಿಯ ಅಧ್ಯಾಪಕರ ಸಾಮರ್ಥ್ಯಗಳಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿದೆ ಮತ್ತು ಅವರಿಗೆ ಬೇಕಾದ ಎಲ್ಲ ರೀತಿಯ ಸಹಾಯ ಮಾಡಲು ನಾವು ಸಿದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಸ್ಟಾರ್ಟ್ಅಪ್ಗಳು ಮತ್ತು ಯೂನಿಕಾರ್ನ್ ಕಂಪನಿಗಳ ಕ್ಷೇತ್ರದಲ್ಲಿ ದೇಶದ ಅಸಾಧಾರಣ ಬೆಳವಣಿಗೆಯ ಕುರಿತು ಮಾತನಾಡಿದ ಪ್ರಧಾನಿ, ಅವುಗಳಲ್ಲಿ ಹಲವು ಐಐಟಿಗಳ ವಿದ್ಯಾರ್ಥಿಗಳಿಂದಲೇ ಪ್ರಾರಂಭವಾಗಿವೆ ಎಂದು ಹೇಳಿದರು.
ಕಳೆದ ಏಳು ವರ್ಷಗಳಲ್ಲಿ ತಮ್ಮ ಸರ್ಕಾರ ಆತ್ಮನಿರ್ಭರ ಭಾರತ ಗುರಿಯನ್ನು ಸಾಧಿಸಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಐಐಟಿಯ ವಿದ್ಯಾರ್ಥಿಗಳು ಅದರಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ಆವಿಷ್ಕಾರಗಳು ಮತ್ತು ತಾಂತ್ರಿಕ ಉಪಕ್ರಮಗಳತ್ತ ಗಮನಹರಿಸುವಾಗ ತಮ್ಮ ಜೀವನದ ಭಾವನಾತ್ಮಕ ಅಂಶಗಳನ್ನು ನಿರ್ಲಕ್ಷಿಸದಂತೆ ಮೋದಿ ಸಲಹೆ ನೀಡಿದ್ದಾರೆ.
ಘಟಿಕೋತ್ಸವದ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ಬ್ಲಾಕ್ಚೈನ್ ಆಧಾರಿತ ಡಿಜಿಟಲ್ ಪದವಿಗಳನ್ನು ಪ್ರಾರಂಭಿಸಿದರು ಮತ್ತು ರಾಷ್ಟ್ರೀಯ ಬ್ಲಾಕ್ಚೈನ್ ಯೋಜನೆಯ ಅಡಿಯಲ್ಲಿ ಇನ್ಸ್ಟಿಟ್ಯೂಟ್ನಲ್ಲಿ ಅಭಿವೃದ್ಧಿಪಡಿಸಲಾದ ಆಂತರಿಕ ಬ್ಲಾಕ್ಚೈನ್ ಚಾಲಿತ ತಂತ್ರಜ್ಞಾನದ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೆ ಡಿಜಿಟಲ್ ಪದವಿಗಳನ್ನು ವಿತರಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.