ಕೊಹಿಮಾ: ಈ ತಿಂಗಳ ಆರಂಭದಲ್ಲಿ ನಾಗಾಲ್ಯಾಂಡ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 14 ನಾಗರಿಕರು ಸಾವನ್ನಪ್ಪಿದ ಘಟನೆಯಲ್ಲಿ ಭಾಗಿಯಾಗಿರುವ ಸೈನಿಕರ ಹೇಳಿಕೆಗಳನ್ನು ದಾಖಲಿಸಲು ಮತ್ತು ಪರಿಶೀಲಿಸಲು ನಾಗಾಲ್ಯಾಂಡ್ನ ವಿಶೇಷ ತನಿಖಾ ತಂಡಕ್ಕೆ ಸೇನೆ ಒಪ್ಪಿಗೆ ನೀಡಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.
“ಡಿಸೆಂಬರ್ 4 ರಂದು ನಡೆದ ಘಟನೆಗಳ ತನಿಖೆಗೆ ಬೆಂಬಲ ಮತ್ತು ಸಹಕಾರವನ್ನು ವಿಸ್ತರಿಸುವ ಭರವಸೆಯನ್ನು ಮೊದಲ ದಿನದಿಂದಲೇ ಭಾರತೀಯ ಸೇನೆಯು ಅಧಿಕಾರಿಗಳಿಗೆ ನೀಡಿದೆ” ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್ 4 ಮತ್ತು 5 ರಂದು ನಾಗಾಲ್ಯಾಂಡ್ನ ಸೋಮ ಜಿಲ್ಲೆಯಲ್ಲಿ ನಡೆದ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಯಲ್ಲಿ 14 ಮಂದಿ ನಾಗರಿಕರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಉದ್ರೇಕಗೊಂಡ ಸ್ಥಳೀಯ ಗ್ರಾಮಸ್ಥರು ಯೋಧರನ್ನು ಸುತ್ತುವರಿದು ನಡೆಸಿದ ದಾಳಿಯಲ್ಲಿ ಒಬ್ಬ ಯೋಧ ಕೂಡ ಸಾವನ್ನಪ್ಪಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್ನಿಂದ AFSPA ಅನ್ನು ತೆಗೆದುಹಾಕುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.