ಹುಬ್ಬಳ್ಳಿ: ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಸ್ವತಂತ್ರಗೊಳಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಾರೋಪದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.
ಹಿಂದೂ ದೇವಾಲಯಗಳ ಮೇಲೆ ನಿಯಂತ್ರಣವನ್ನು ಸಾಧಿಸಲು ಹಲವಾರು ಕಾನೂನಿನ ಕಟ್ಟುಪಾಡುಗಳಿವೆ, ಇವುಗಳನ್ನು ಗೆಜೆಟ್ ಅಧಿವೇಶನಕ್ಕೂ ಮುನ್ನ ತೆಗೆದುಹಾಕಲಾಗುತ್ತದೆ ಮತ್ತು ಸ್ವತಂತ್ರ ನಿರ್ವಹಣೆಗೆ ಅವಕಾಶ ಮಾಡಿಕೊಡುವ ಕಾನೂನನ್ನು ಜಾರಿಗೊಳಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ದೇವಸ್ಥಾನಗಳ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ದೇಗುಲದ ಅಭಿವೃದ್ಧಿಗೆ ಬಳಸುವ ಅಧಿಕಾರ ಇಲ್ಲ, ಒಂದು ವೇಳೆ ಬಳಸಬೇಕಾದರೆ ಅಧಿಕಾರಿಯ ಅನುಮತಿಯನ್ನು ಪಡೆಯಬೇಕಾದ ವ್ಯವಸ್ಥೆಯಿದೆ. ಆದರೆ ಬೇರೆ ಧರ್ಮಗಳ ಪ್ರಾರ್ಥನಾ ಮಂದಿರಗಳಲ್ಲಿ ಯಾವುದೇ ಆಚರಣೆಗೆ ಕಾನೂನಿನ ಕಟ್ಟುಪಾಡುಗಳಿಲ್ಲ. ಇಂತಹ ಸ್ವಾತಂತ್ರ್ಯವನ್ನು ಹಿಂದೂ ದೇಗುಲಗಳಿಗೂ ನೀಡಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.