ನವದೆಹಲಿ: ನಮಾಜ್ ಮಾಡುವುದು ಶಕ್ತಿ ಪ್ರದರ್ಶನವಾಗಬಾರದು ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಹೇಳಿದ್ದಾರೆ.
ಗುರುಗಾಂವ್ನ ಕೆಲವು ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ಪ್ರಾರ್ಥನೆ ನಡೆಸುತ್ತಿರುವ ಸಲುವಾಗಿ ಎದ್ದಿರುವ ವಿವಾದಗಳ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಭಾರತೀಯ ಮಹಿಳಾ ಪತ್ರಿಕಾ ನಿಗಮದ ಸದಸ್ಯರೊಂದಿಗೆ ಸಂವಾದ ನಡೆಸಿದ ಖಟ್ಟರ್, “ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ನಡೆಸುವುದು ಸೂಕ್ತವಲ್ಲ, ನಮಾಜ್ ನಮಾಜ್ ಆಗಿ ಉಳಿಯಬೇಕು ಮತ್ತು ಅದು ಶಕ್ತಿ ಪ್ರದರ್ಶನವಾಗಬಾರದು” ಎಂದು ಹೇಳಿದ್ದಾರೆ.
ಜನರು ಪೂಜಿಸಲು ಮತ್ತು ಪ್ರಾರ್ಥನೆ ಮಾಡಲು ಸ್ವತಂತ್ರರು ಆದರೆ ಅದು ನಿರ್ದಿಷ್ಟ ಸ್ಥಳಗಳಲ್ಲಿ ಇರಬೇಕು ಎಂದು ಅವರು ಹೇಳಿದ್ದಾರೆ.
ಯಾವುದೇ ಭಿನ್ನಾಭಿಪ್ರಾಯಗಳಿದ್ದರೆ ವಿವಿಧ ಧರ್ಮಗಳ ಜನರು ಮಧ್ಯಸ್ಥಿಕೆ ವಹಿಸಲು ಸ್ಥಳೀಯ ಆಡಳಿತವನ್ನು ಸಂಪರ್ಕಿಸಬಹುದು ಎಂದಿದ್ದಾರೆ.
ರೈತರ ಪ್ರತಿಭಟನೆ ಕುರಿತು ಮಾತನಾಡಿದ ಖಟ್ಟರ್, ಪ್ರತಿಭಟನೆಯ ಹಿಂದೆ ರಾಜಕೀಯ ಮಹತ್ವಾಕಾಂಕ್ಷೆ ಇರುವವರು ಇರುವುದರಿಂದ ಪ್ರತಿಭಟನೆ ಆರಂಭಿಸಿದವರು ಮತ್ತು ಬೆಂಬಲಿಸಿದವರ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವ ಅಗತ್ಯವಿದೆ. ಪ್ರತಿಭಟನೆಗಳನ್ನು ಆರಂಭಿಸಿದವರು ತಮ್ಮನ್ನು ‘ಕಿಸಾನ್ ನೇತಾ’ ಎಂದು ಕರೆದುಕೊಳ್ಳುತ್ತಾರೆ, ಆದರೆ ಅವರಿಗೆ ರಾಜಕೀಯ ಮಹತ್ವಾಕಾಂಕ್ಷೆಗಳಿವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.