ನವದೆಹಲಿ: ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯದ ಶಂಕುಸ್ಥಾಪನೆಗಾಗಿ ಪ್ರಧಾನಿ ನರೇಂದ್ರ ಮೋದಿ ಜನವರಿ 2 ರಂದು ಮೀರತ್ಗೆ ಭೇಟಿ ನೀಡಲಿದ್ದಾರೆ ಎಂದು ಪಿಎಂಒ ಪ್ರಕಟಣೆ ಇಂದು ತಿಳಿಸಿದೆ.
ಮೀರತ್ನ ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಗ್ರಾಮಗಳಲ್ಲಿ ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುತ್ತಿದೆ.
ಪ್ರಧಾನಿ ಮೋದಿ ಅವರು ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಬೆಳೆಸಲು ಮತ್ತು ದೇಶದ ಎಲ್ಲಾ ಭಾಗಗಳಲ್ಲಿ ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ಸ್ಥಾಪಿಸಲು ಹೆಚ್ಚಿನ ಗಮನವನ್ನು ನೀಡುತ್ತಿದ್ದಾರೆ. ಮೀರತ್ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯದ ಸ್ಥಾಪನೆಯು ಈ ದೃಷ್ಟಿಕೋನವನ್ನು ಈಡೇರಿಸುವ ಪ್ರಮುಖ ಹೆಜ್ಜೆಯಾಗಿದೆ ಎಂದು ಪ್ರಕಟಣೆ ಹೇಳಿದೆ.
“ಕ್ರೀಡಾ ವಿಶ್ವವಿದ್ಯಾಲಯವು ಸಿಂಥೆಟಿಕ್ ಹಾಕಿ ಮೈದಾನ, ಫುಟ್ಬಾಲ್ ಮೈದಾನ, ಬಾಸ್ಕೆಟ್ಬಾಲ್/ವಾಲಿಬಾಲ್/ಹ್ಯಾಂಡ್ಬಾಲ್/ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಅಂಕಣ, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜುಕೊಳ, ಒಂದು ಸೈಕ್ಲಿಂಗ್ ವೆಲೋಡ್ರೋಮ್, ವಿವಿಧೋದ್ದೇಶ ಹಾಲ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ” ಎಂದು ಪ್ರಕಟಣೆ ತಿಳಿಸಿದೆ.
ವಿಶ್ವವಿದ್ಯಾನಿಲಯವು ಶೂಟಿಂಗ್, ಸ್ಕ್ವಾಷ್, ಜಿಮ್ನಾಸ್ಟಿಕ್ಸ್, ವೇಟ್ಲಿಫ್ಟಿಂಗ್, ಆರ್ಚರಿ, ಕ್ಯಾನೋಯಿಂಗ್ ಮತ್ತು ಕಯಾಕಿಂಗ್ ಇತ್ಯಾದಿಗಳಿಗೆ ಸೌಲಭ್ಯಗಳನ್ನು ಹೊಂದಲಿದೆ.
ವಿಶ್ವವಿದ್ಯಾನಿಲಯವು 540 ಮಹಿಳೆಯರು ಮತ್ತು 540 ಪುರುಷ ಕ್ರೀಡಾಪಟುಗಳು ಸೇರಿದಂತೆ 1,080 ಕ್ರೀಡಾಪಟುಗಳಿಗೆ ತರಬೇತಿ ನೀಡುವ ಸಾಮರ್ಥ್ಯವನ್ನು ಹೊಂದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.