ಜಮ್ಮು: 2021 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ನಡೆಸಿದ 100 ಯಶಸ್ವಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ 44 ಉನ್ನತ ಉಗ್ರ ಕಮಾಂಡರ್ಗಳು ಮತ್ತು 20 ವಿದೇಶಿಯರು ಸೇರಿದಂತೆ ಒಟ್ಟು 182 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು-ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಶುಕ್ರವಾರ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೋಲೀಸರ 100ನೇ ಯಶಸ್ವಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಒಂದು ದಿನದ ನಂತರ ಭಯೋತ್ಪಾದಕರ ಒಟ್ಟು ಸಾವುನೋವುಗಳ ಸಂಖ್ಯೆಯನ್ನು ಪೊಲೀಸ್ ಮಹಾನಿರ್ದೇಶಕರು ಬಹಿರಂಗಪಡಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಪಂಥಾ ಚೌಕ್ನಲ್ಲಿ ಪೊಲೀಸ್ ಬಸ್ನ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ಒಟ್ಟು ಒಂಬತ್ತು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಮತ್ತು ವರ್ಷದಲ್ಲಿ ಒಟ್ಟು 20 ವಿದೇಶಿ ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಅಫ್ಘಾನಿಸ್ತಾನದಿಂದ ಯಾವುದೇ ಭಯೋತ್ಪಾದಕರು ದೇಶದೊಳಗೆ ನುಸುಳಿದ ಯಾವುದೇ ನಿದರ್ಶನ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಗಡಿಯಾಚೆಗಿನ ಭಯೋತ್ಪಾದಕರ ಒಳನುಸುಳುವಿಕೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
‘ಕಳೆದ ರಾತ್ರಿ ನಾವು 100 ನೇ ಯಶಸ್ವಿ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ್ದೇವೆ. 100 ಯಶಸ್ವಿ ಕಾರ್ಯಾಚರಣೆಗಳಲ್ಲಿ, ನಾವು ವಿವಿಧ ಸಂಘಟನೆಗಳ 182 ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇವೆ” ಎಂದು ಸಿಂಗ್ ಜಮ್ಮು-ಕಾಶ್ಮೀರ ಪೊಲೀಸರ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಿರಂತರವಾಗಿ ನಡೆಯುತ್ತಿರುವ ಯಶಸ್ವಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳ ಕಾರಣದಿಂದಾಗಿ, ಜಮ್ಮು ಮತ್ತು ಕಾಶ್ಮೀರವನ್ನು ದೊಡ್ಡ ಮಟ್ಟದ ಅಪಾಯಗಳಿಂದ ಪಾರು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ವರ್ಷ ಹತರಾದ 44 ಪ್ರಮುಖ ಭಯೋತ್ಪಾದಕರ ಪೈಕಿ 26 ಮಂದಿ ಲಷ್ಕರ್-ಎ-ತೈಬಾ (ಎಲ್ಇಟಿ), 10 ಮಂದಿ ಜೈಶ್-ಎ-ಮೊಹಮ್ಮದ್ (ಜೆಇಎಂ), ಏಳು ಮಂದಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್ಎಂ) ಮತ್ತು ಒಬ್ಬ ಅಲ್-ಬದ್ರ್ಗೆ ಸೇರಿದವನು ಎಂದು ಡಿಜಿಪಿ ಹೇಳಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕರ ಪೈಕಿ 20 ಮಂದಿ ವಿದೇಶಿಗರು ಎಂದು ಅವರು ಹೇಳಿದ್ದಾರೆ.
ಈ ಉನ್ನತ ಭಯೋತ್ಪಾದಕರು ಪಾಕಿಸ್ತಾನದ ಆಜ್ಞೆಯ ಮೇರೆಗೆ ಭಯೋತ್ಪಾದಕ ಕೃತ್ಯಗಳ ಸಂಚು ರೂಪಿಸುವ ಮತ್ತು ಅದನ್ನು ಕಾರ್ಯಗತ ಮಾಡುವ ಮೂಲಕ ಜನರಲ್ಲಿ ಭಯೋತ್ಪಾದನೆಯನ್ನು ಹರಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
‘ಹಲವು ವರ್ಷಗಳ ನಂತರ ಈ ಬಾರಿ ಅತ್ಯಂತ ಕಡಿಮೆ ಸಂಖ್ಯೆಯ ಭಯೋತ್ಪಾದಕರು ಸಕ್ರಿಯರಾಗಿದ್ದಾರೆ. ದೀರ್ಘಾವಧಿಯ ನಂತರ ಅವರು ಸಂಖ್ಯೆ ಕಡಿಮೆಯಾಗಿದೆ” ಎಂದರು.
ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಮತ್ತು ಗಡಿಯಾಚೆಗಿನ ಒಳನುಸುಳುವಿಕೆಯನ್ನು ನಿಗ್ರಹಿಸುವ ವಿಷಯದಲ್ಲಿಯೂ ಈ ವರ್ಷ ಯಶಸ್ವಿಯಾಗಿದೆ ಎಂದು ಡಿಜಿಪಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.