ನವದೆಹಲಿ: ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳು, ಪ್ರಧಾನಿ ಹೊಸ ವರ್ಷದ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಸಂದೇಶದಲ್ಲಿ, ಹೊಸ ವರ್ಷವು ಬಹಳಷ್ಟು ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ, ಜೊತೆಗೆ ಪ್ರತಿಯೊಬ್ಬರ ಜೀವನದಲ್ಲಿ ಯಶಸ್ಸು ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ. ಹೊಸ ವರ್ಷದ ಹೊಸ ಮುಂಜಾನೆ ನಮ್ಮ ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಭ್ರಾತೃತ್ವದ ಮನೋಭಾವವನ್ನು ಪುನರುಜ್ಜೀವನಗೊಳಿಸುತ್ತದೆ ಎಂದು ಅವರು ಆಶಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯ ಕೋರಿದ್ದು, ಈ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಮೋದಿ ಟ್ವೀಟ್ ನಲ್ಲಿ ಹಾರೈಸಿದ್ದಾರೆ. ದೇಶವಾಸಿಗಳು ಪ್ರಗತಿ ಮತ್ತು ಸಮೃದ್ಧಿಯ ಹೊಸ ಉತ್ತುಂಗವನ್ನು ಏರುತ್ತಿರಲಿ ಮತ್ತು ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಇನ್ನಷ್ಟು ಶ್ರಮಿಸಬೇಕೆಂದು ಅವರು ಹಾರೈಸಿದರು.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾರೈಸಿ, ಹೊಸ ವರ್ಷ ಹೊಸ ಆರಂಭದ ಸಮಯ. ಜೀವನದಲ್ಲಿ ಹೊಸ ಗುರಿಗಳನ್ನು ಹೊಂದಲು ಮತ್ತು ಹೊಸ ಸಂಕಲ್ಪಗಳನ್ನು ಮಾಡಲು ಇದು ಸಮಯವಾಗಿದೆ ಎಂದು ಹೇಳಿದರು. ಈ ಹೊಸ ವರ್ಷದಲ್ಲಿ, ನಾವು ದಯೆ, ಹೆಚ್ಚು ಸಹಾನುಭೂತಿಯ ಮನುಷ್ಯರಾಗಿರಲು ಸಂಕಲ್ಪ ಮಾಡೋಣ ಎಂದಿದ್ದಾರೆ.
ಕೋವಿಡ್ ಆತಂಕದ ನಡುವೆ ಭಾರತ ಹೊಸ ಕ್ಯಾಲೆಂಡರ್ ವರ್ಷವನ್ನು ಆಚರಿಸುತ್ತಿದೆ. ಓಮಿಕ್ರಾನ್ ಭೀತಿಯಿಂದ ಸಂಭ್ರಮಾಚಣೆಗೆ ನಿರ್ಬಂಧ ಹೇರಲಾಗಿದೆ.
ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಜನರು ತಮ್ಮ ಮನೆಯ ಇತಿಮಿತಿಯಿಂದ ಹೊಸ ವರ್ಷವನ್ನು ಸ್ವಾಗತಿಸುವಂತೆ ಮನವಿ ಮಾಡಲಾಗಿದೆ.
Happy 2022!
May this year bring abundance of joy and good health in everyone’s lives.
May we keep scaling new heights of progress and prosperity, and work even harder to fulfil the dreams of our great freedom fighters. pic.twitter.com/dHoaD4tbpk
— Narendra Modi (@narendramodi) January 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.