ನವದೆಹಲಿ: ಜಾನುವಾರು ಕಳ್ಳಸಾಗಣೆ ನಿರ್ಮೂಲನೆಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿವೆ. ಭಾರತ-ಬಾಂಗ್ಲಾ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ಗಣನೀಯವಾಗಿ ಕಡಿಮೆಯಾಗಿದೆ. 2015ರಲ್ಲಿ ಇದ್ದ 153,602 ಪ್ರಕರಣಗಳಿಂದ ನವೆಂಬರ್ 2021 ರಲ್ಲಿ 20,415 ಕ್ಕೆ ಜಾನುವಾರು ಕಳ್ಳಸಾಗಣೆ ಇಳಿದಿದೆ.
2017 ರಲ್ಲಿ 1,19,299 ರಿಂದ 2018 ರಲ್ಲಿ 63,716 ಕ್ಕೆ ಪ್ರಕರಣ ಇಳಿದಿದ್ದು, ಶೇಕಡಾ 50 ರಷ್ಟು ಕುಸಿತ ಕಂಡಿದೆ. ಕಳೆದ ಮೂರು ವರ್ಷಗಳಿಂದ ಸಂಖ್ಯೆಗಳು ಸ್ಥಿರವಾಗಿ ಕುಸಿಯುತ್ತಿವೆ.
2019 ಮತ್ತು 2020 ರಲ್ಲಿ ಕ್ರಮವಾಗಿ 46,809 ಮತ್ತು 20,415 ಕ್ಕೆ ಪ್ರಕರಣಗಳು ಕಡಿಮೆಯಾಗಿದೆ ಎಂದು ವರದಿ ಹೇಳಿದೆ.
ಗಡಿಯನ್ನು ಸರಿಯಾಗಿ ಮೇಲ್ವಿಚಾರಣೆ ಮಾಡಲು ಮತ್ತು ಈ ಪ್ರದೇಶದಲ್ಲಿ ಜಾನುವಾರು ಕಳ್ಳಸಾಗಣೆಯನ್ನು ಕೊನೆಗೊಳಿಸಲು ಬಿಎಸ್ಎಫ್ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದೆ.
ದೋಣಿಗಳನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಮತ್ತು ಗಡಿಯಾಚೆಗಿನ ಅಪರಾಧಿಯ ಮೇಲೆ ಗುಂಡಿನ ದಾಳಿಯ ಮೂಲಕ ಕಟ್ಟುನಿಟ್ಟಾದ ಕ್ರಮಗಳನ್ನು ಬಿಎಸ್ಎಫ್ ತೆಗೆದುಕೊಳ್ಳುವ ಮೂಲಕ ಕಳ್ಳಸಾಗಣೆದಾರರನ್ನು ಹೆಡೆಮುರಿ ಕಟ್ಟುವ ಕೆಲಸವನ್ನು ಮಾಡಲಾಗುತ್ತಿದೆ. ಬಿಎಸ್ಎಫ್ 2021 ರಲ್ಲಿ ಅಧಿಕೃತ ಹೇಳಿಕೆಯಲ್ಲಿ ಜಾನುವಾರು ಕಳ್ಳಸಾಗಣೆಯನ್ನು ದೇಶದ್ರೋಹದ ಒಂದು ರೂಪವೆಂದು ಉಲ್ಲೇಖಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.