ನವದೆಹಲಿ: ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದೆ.
ಛತ್ತೀಸ್ಗಢ ಸರ್ಕಾರವು ಸೋಂಕು ಹರಡುವುದನ್ನು ತಡೆಯಲು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಈ ಮಾರ್ಗಸೂಚಿಗಳ ಪ್ರಕಾರ, ಪಾಸಿಟಿವ್ ಪ್ರಮಾಣವು ಶೇಕಡಾ 4 ಅಥವಾ ಅದಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ವಾಣಿಜ್ಯೇತರ ಚಟುವಟಿಕೆಗಳ ಮೇಲೆ ನಿಷೇಧವಿರುತ್ತದೆ.
ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರ ಕ್ರಮಗಳನ್ನು ಘೋಷಿಸಿದೆ. ರಾಜ್ಯದಲ್ಲಿ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳನ್ನು ಜನವರಿ 14ರವರೆಗೆ ಮುಚ್ಚಲಾಗಿದೆ. ರಾತ್ರಿ ಕರ್ಫ್ಯೂ ಇನ್ನೂ ಎರಡು ಗಂಟೆಗಳ ಕಾಲ ವಿಸ್ತರಿಸಲಾಗಿದೆ. ಹೊಸ ಮಾರ್ಗಸೂಚಿಗಳು ಇಂದಿನಿಂದ ರಾಜ್ಯದಲ್ಲಿ ಜಾರಿಯಾಗಲಿವೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಸೋಂಕನ್ನು ತಡೆಯಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 992 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ, ಇದು ಇತ್ತೀಚಿನ ತಿಂಗಳುಗಳಲ್ಲಿ ಒಂದೇ ದಿನದಲ್ಲಿ ಕಂಡುಬಂದ ಅತಿ ಹೆಚ್ಚು ಕೋವಿಡ್ ಪ್ರಕರಣಗಳು. ಒಟ್ಟು 23 ರೋಗಿಗಳು ಕೋವಿಡ್ನ ಓಮಿಕ್ರಾನ್ ರೂಪಾಂತರ ಸೋಂಕಿಗೆ ಒಳಗಾಗಿದ್ದಾರೆ.
ಮಹಾರಾಷ್ಟ್ರ, ಕೇರಳ ಸೇರಿದಂತೆ ಇನ್ನೂ ಹಲವು ರಾಜ್ಯಗಳು ಕಠಿಣ ನಿರ್ಬಂಧಗಳನ್ನು ವಿಧಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.