ನವದೆಹಲಿ: ಇಂದು ಪಂಜಾಬ್ನಲ್ಲಿ ರಸ್ತೆ ಮೂಲಕ ಪ್ರಯಾಣಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡ ಘಟನೆ ನಡೆದಿದೆ. ಈ ಘಟನೆಯನ್ನು ಕೇಂದ್ರ ಗೃಹ ಸಚಿವಾಲಯವು ದೊಡ್ಡ ಭದ್ರತಾ ಪ್ರಮಾದ ಎಂದು ಬಣ್ಣಿಸಿದೆ.
ಪಂಜಾಬ್ನಲ್ಲಿ ಪ್ರಧಾನಿಯವರ ಪ್ರಯಾಣದಲ್ಲಿ ಪ್ರಮುಖ ಭದ್ರತಾ ಲೋಪವಾದ ಹಿನ್ನೆಲೆಯಲ್ಲಿ ಅವರ ಬೆಂಗಾವಲು ಪಡೆ ಹಿಂತಿರುಗಲು ನಿರ್ಧರಿಸಿತು ಎಂದು ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಸಚಿವಾಲಯವು ಪಂಜಾಬ್ ಸರ್ಕಾರವನ್ನು ಲೋಪಕ್ಕೆ ಹೊಣೆಗಾರನಾಗಿ ಮಾಡಿದೆ ಮತ್ತು ಘಟನೆ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಕೇಳಿದೆ ಎಂದು ಹೇಳಿಕೆ ತಿಳಿಸಿದೆ.
“ಪ್ರಧಾನಿ ಭದ್ರತೆಯಲ್ಲಿ ಗಂಭೀರವಾದ ಭದ್ರತಾ ಲೋಪವನ್ನು ಕೇಂದ್ರ ಗೃಹ ಸಚಿವಾಲಯ ಗಮನಿಸಿದೆ, ಪಂಜಾಬ್ ಸರ್ಕಾರದಿಂದ ವಿವರವಾದ ವರದಿಯನ್ನು ಕೇಳಲಾಗಿದೆ” ಎಂದಿದೆ.
ಘಟನೆ ನಡೆದಾಗ ಪ್ರಧಾನಿಯವರು ಬಟಿಂಡಾದಿಂದ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ತೆರಳುತ್ತಿದ್ದರು. ಪಂಜಾಬ್ನಲ್ಲಿ ಪ್ರಧಾನಿಯವರ ಪ್ರಯಾಣದಲ್ಲಿ ಪ್ರಮುಖ ಭದ್ರತಾ ಲೋಪದ ನಂತರ, ಅವರ ಬೆಂಗಾವಲು ಪಡೆ ಮತ್ತೆ ಬಟಿಂಡಾ ವಿಮಾನ ನಿಲ್ದಾಣಕ್ಕೆ ತೆರಳಲು ನಿರ್ಧರಿಸಿತು ಎಂದು ಸಚಿವಾಲಯ ಮಾಹಿತಿ ನೀಡಿದೆ.
“ಪಂಜಾಬ್ಗೆ ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಲು ಪ್ರಧಾನಿ ಭೇಟಿಗೆ ಅಡ್ಡಿಪಡಿಸಿರುವುದು ದುಃಖಕರವಾಗಿದೆ. ಸಮಾವೇಶಕ್ಕೆ ಜನರು ಬಾರದಂತೆ ತಡೆಯಲು ರಾಜ್ಯ ಪೊಲೀಸರಿಗೆ ಸೂಚನೆ ನೀಡಲಾಯಿತು. ಸಿಎಂ ಚನ್ನಿಗೆ ವಿಷಯ ತಿಳಿಸಲು ಫೋನ್ ಮಾಡಿದರೆ ಸ್ವೀಕರಿಸಲು ನಿರಾಕರಿಸಿದರು” ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಹೇಳಿದ್ದಾರೆ.
ಈ ನಡುವೆ, “ಕೆಲವು ಕಾರಣಗಳಿಂದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲು ಪಿಎಂ ನರೇಂದ್ರ ಮೋದಿ ಪಂಜಾಬ್ನ ಫಿರೋಜ್ಪುರಕ್ಕೆ ತಮ್ಮ ನಿಗದಿತ ಭೇಟಿಯನ್ನು ರದ್ದುಗೊಳಿಸಬೇಕಾಯಿತು” ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ವೇದಿಕೆಯಿಂದ ಘೋಷಿಸಿದರು.
It is sad that the PM’s visit to launch development projects worth thousands of crores for Punjab was disrupted. But we will not let such cheap mentality hinder progress of Punjab and will continue the effort for the development of Punjab.
— Jagat Prakash Nadda (@JPNadda) January 5, 2022
The state police was instructed to prevent people from attending the rally. Large number of buses were stranded because of the high-handedness of the police & connivance with protestors.
— Jagat Prakash Nadda (@JPNadda) January 5, 2022
To make matters worse, CM Channi refused to get on the phone to either address the matter or solve it.
The tactics used by the Congress government in Punjab would pain any one who believes in democratic principles.— Jagat Prakash Nadda (@JPNadda) January 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.