ಬೆಂಗಳೂರು: ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದಲ್ಲಿ “ಲಘು ಉದ್ಯೋಗ-ಭಾರತ ವತಿಯಿಂದ ಟೆಕ್ ಭಾರತ್ 2022” ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಬೆಳಗಾವಿಯಲ್ಲಿ ಹೇಳಿದರು.
ಆಹಾರ, ಸ್ವದೇಶಿ ಉತ್ಪನ್ನ ಮಳಿಗೆಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಚಿವರು, ರೈತರು ಬೆಳೆಯುವ ಧಾನ್ಯಗಳು, ತಯಾರಿಸುವ ಆಹಾರ ಪದಾರ್ಥಗಳ ಗುಣಮಟ್ಟ ಕಾಯ್ದುಕೊಳ್ಳುವ ಜತೆ ಅವುಗಳ ಮೌಲ್ಯವರ್ಧನೆಗೆ ತಂತ್ರಜ್ಞಾನದ ಬಳಕೆ ಬಹು ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರದ ನೆರವು ಸದಾ ಇರಲಿದೆ ಎಂದರು.
ಅಗ್ರಿಟೆಕ್ ಮತ್ತು ಫುಡ್ ಪ್ರೊಸೆಸಿಂಗ್ ಕುರಿತ ಈ ಕಾರ್ಯಕ್ರಮದಲ್ಲಿ ವ್ಯವಸಾಯದ ಗುಣಮಟ್ಟ ಹೆಚ್ಚಿಸುವ ಜತೆ ನಮ್ಮ ರೈತರ ಬೆಳೆಗಳಿಗೆ ಹೆಚ್ಚಿನ ಬೆಳೆ ಸಿಗುವಂತೆ ಮಾಡುವುದು ನಮ್ಮ ಮೂಲ ಉದ್ದೇಶ ಎಂದರು.
ರಾಜ್ಯದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರೈತರು ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಅಭಿವೃದ್ಧಿ ಸಾಧಿಸಬಹುದಾಗಿದೆ ಎಂದರು.
ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ 9ನೇ ತರಗತಿಯ ವರೆಗೂ ಶಾಲೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಜನರು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಮನವಿ ಮಾಡಿದರು.
ನಮ್ಮ ಬೆಳಗಾವಿಯಲ್ಲಿ ಆಯೋಜಿಸಲಾಗಿರುವ TECHBHARAT 2022 ಕಾರ್ಯಕ್ರಮಕ್ಕೆ ಆಗಮಿಸಿರುವ ಆಹಾರ, ಸ್ವದೇಶಿ ಉತ್ಪನ್ನ ಮಳಿಗೆಗಳಿಗೆ ಭೇಟಿ ನೀಡಿದೆ.
ರೈತರು ಬೆಳೆಯುವ ಧಾನ್ಯಗಳು, ತಯಾರಿಸುವ ಆಹಾರ ಪದಾರ್ಥಗಳ ಗುಣಮಟ್ಟ ಕಾಯ್ದುಕೊಳ್ಳುವ ಜತೆ ಅವುಗಳ ಮೌಲ್ಯವರ್ಧನೆಗೆ ತಂತ್ರಜ್ಞಾನದ ಬಳಕೆ ಬಹು ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರದ ನೆರವು ಸದಾ ಇರಲಿದೆ. pic.twitter.com/Aa4p9JSSFH
— Dr. Ashwathnarayan C. N. (@drashwathcn) January 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.