ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಕ್ತ ಭದ್ರತೆ ಒದಗಿಸಲು ಸಾಧ್ಯವಾಗದ ಪಂಜಾಬ್ ಸರ್ಕಾರಕ್ಕೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ. ಹೀಗಾಗಿ ಪಂಜಾಬ ಸರ್ಕಾರವನ್ನು ಕೂಡಲೇ ಬರಖಾಸ್ತು ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಕ್ಷೇತ್ರದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.
ಪಂಜಾಬ್ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭದ್ರತಾ ಲೋಪವಾಗಿರುವ ಕುರಿತು ಸುದ್ದಿದಾರರ ಪ್ರಶ್ನೆಗಳಿಗೆ ಉತ್ತರಿಸಿದರು.
ಪಂಜಾಬ್ ಗಡಿಯಲ್ಲಿ ಪಂಜಾಬ್ ಸರ್ಕಾರ ಪ್ರಧಾನಮಂತ್ರಿಗಳಿಗೆ ಭದ್ರತೆ ಕೊಡಲು ವಿಫಲವಾಗಿದೆ. ದೇಶದ ಪ್ರಧಾನಮಂತ್ರಿಗಳು ಮುಕ್ತವಾಗಿ ಓಡಾಡಲು ವ್ಯವಸ್ಥೆಗಳನ್ನು ಮಾಡಿಕೊಡದೇ ಇರುವುದು ಬಹುತೇಕವಾಗಿ ದೇಶದಲ್ಲಿ ಖಂಡನೆಯಾಗುತ್ತಿದೆ. ಇದೊಂದು ಖಂಡಾನಾರ್ಹ ವಿಚಾರ. ಪ್ರಧಾನಮಂತ್ರಿಗಳಿಗೆ ಗೌರವ ಕೊಡುವುದು ಎಲ್ಲ ಸರ್ಕಾರಗಳ ಕರ್ತವ್ಯ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮತ್ತು ಈ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಉಗ್ರವಾದ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಇದು ಒಂದು ಸಹಜ ಘಟನೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚೆನ್ನಿ ಅವರು ನೀಡಿರುವ ಬೇಜವಾಬ್ದಾರಿ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ
2/2— Basavaraj S Bommai (@BSBommai) January 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.