ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಗಿರುವ ಭದ್ರತಾ ಲೋಪಗಳ ಕುರಿತು ತನಿಖೆ ನಡೆಸಲು ಪಂಜಾಬ್ ಸರ್ಕಾರ ಗುರುವಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಮಿತಿಯು ನ್ಯಾಯಮೂರ್ತಿ (ನಿವೃತ್ತ) ಮೆಹ್ತಾಬ್ ಸಿಂಗ್ ಗಿಲ್, ಪ್ರಧಾನ ಕಾರ್ಯದರ್ಶಿ (ಗೃಹ ವ್ಯವಹಾರಗಳು) ಮತ್ತು ನ್ಯಾಯಮೂರ್ತಿ ಅನುರಾಗ್ ವರ್ಮಾ ಅವರನ್ನು ಒಳಗೊಂಡಿರುತ್ತದೆ ಮತ್ತು 3 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ.
ರಸ್ತೆ ಸಂಚಾಋದಲ್ಲಿ ಪ್ರಮುಖ ಭದ್ರತಾ ಲೋಪವಾದ ಹಿನ್ನೆಲೆಯಲ್ಲಿ ಪ್ರಧಾನಿಯವರ ಬೆಂಗಾವಲು ಪಡೆ ಬುಧವಾರ ಫಿರೋಜ್ಪುರದಲ್ಲಿ ಫ್ಲೈಓವರ್ನಲ್ಲಿ ಸಿಕ್ಕಿಹಾಕಿಕೊಂಡಿತು, ನಂತರ ಮೋದಿ ಸಮಾವೇಶ ಸೇರಿದಂತೆ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗದೆ ಪಂಜಾಬ್ನಿಂದ ಹಿಂತಿರುಗಿದ್ದರು. ಘಟನೆ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದ್ದು, ದೇಶದ ಪ್ರಧಾನಿಗೆ ರಕ್ಷಣೆ ಕೊಡದ ಪಂಜಾಬ್ನ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
ಕೇಂದ್ರ ಗೃಹ ಸಚಿವಾಲಯವು ಪಂಜಾಬ್ ರಾಜ್ಯ ಸರ್ಕಾರಕ್ಕೆ ಭದ್ರತಾ ಲೋಪದ ಬಗ್ಗೆ ತಕ್ಷಣ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ಈ ವರ್ತನೆಗಳನ್ನು ಸಹಿಸಲು ಸಾಧ್ಯವಿಲ್ಲ, ಇದಕ್ಕೆ ರಾಜ್ಯ ಸರ್ಕಾರವನ್ನು ಹೊಣೆಗಾರನನ್ನಾಗಿ ಮಾಡಲಾಗುತ್ತದೆ ಎಂದು ಅಮಿತ್ ಶಾ ಗುಡುಗಿದ್ದಾರೆ.
ಪಂಜಾಬ್ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರಧಾನ ಮಂತ್ರಿಗೆ ದೈಹಿಕವಾಗಿ ಹಾನಿ ಮಾಡಲು ಪ್ರಯತ್ನಿಸಿದೆ ಎಂದು ಬಿಜೆಪಿ ಆರೋಪಿಸಿದ್ದು, ಈ ಘಟನೆಯು ರಾಜಕೀಯ ವಲಯದಲ್ಲಿ ಗದ್ದಲವನ್ನು ಉಂಟುಮಾಡಿದೆ, ಇತರ ಪಕ್ಷಗಳು ಕೂಡ ಕಾನೂನು ಮತ್ತು ಸುವ್ಯವಸ್ಥೆಯ ವಿಷಯದ ಬಗ್ಗೆ ರಾಜ್ಯ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.