ಭೋಪಾಲ್: ನಿನ್ನೆ ಪಂಜಾಬ್ನ ಫಿರೋಜ್ಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವೇಳೆ ಸಂಭವಿಸಿದ ಭದ್ರತಾ ಲೋಪಗಳ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಪ್ರಧಾನಿಯವರ ದೀರ್ಘಾಯುಷ್ಯಕ್ಕಾಗಿ ಭೋಪಾಲ್ನ ಗುಫಾ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪಕ್ಷದ ಮೂಲಗಳ ಪ್ರಕಾರ, ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆಗಳನ್ನು ನಡೆಸಲು ಯೋಜಿಸಿದೆ. ಭಾರತದಾದ್ಯಂತ ಜನರು ವಿವಿಧ ದೇವಾಲಯಗಳಲ್ಲಿ ಮಹಾಮೃತ್ಯುಂಜಯ ಜಪವನ್ನು ಮಾಡಲಿದ್ದಾರೆ ಎನ್ನಲಾಗಿದೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ದುಷ್ಯಂತ್ ಗೌತಮ್ ಮತ್ತು ಬೈಜಯಂತ್ ಪಾಂಡಾ ಅವರು ದೆಹಲಿಯ ಕನ್ನಾಟ್ ಪ್ಲೇಸ್ನ ಹನುಮಾನ್ ಮಂದಿರದಲ್ಲಿ ಪ್ರಾರ್ಥಿಸಲಿದ್ದಾರೆ.
ವಾರಣಾಸಿಯಲ್ಲಿ, ಪ್ರಧಾನಿ ಮೋದಿಗಾಗಿ ಕಾಲಭೈರವ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಮತ್ತು ಆರತಿ ನಡೆಯಲಿದೆ.
ಬುಧವಾರ, ಪಂಜಾಬ್ನಲ್ಲಿ ರಸ್ತೆ ತಡೆಯಿಂದಾಗಿ ಪ್ರಧಾನಿ ಬೆಂಗಾವಲು ಪಡೆ 15-20 ನಿಮಿಷಗಳ ಕಾಲ ಸಿಲುಕಿಕೊಂಡಿತ್ತು. ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಪ್ರಧಾನಿಯವರು ಫಿರೋಜ್ಪುರದಲ್ಲಿ ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಬೇಕಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.