ನವದೆಹಲಿ: ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ 10ನೇ ಕಂತಿನ ಪಿಡಿಆರ್ ಡಿ ಅನುದಾನವಾಗಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರೆಗೆ ಅರ್ಹ ರಾಜ್ಯಗಳಿಗೆ 98,710 ಕೋಟಿ ರೂ. ಬದಲಾವಣೆ ನಂತರದ ಆದಾಯ ಕೊರತೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಸಂವಿಧಾನದ ಕಲಂ 275ರಡಿ ರಾಜ್ಯಗಳಿಗೆ ವಿಕೇಂದ್ರೀಕರಣ ನಂತರದ ಆದಾಯ ಕೊರತೆ ಅನುದಾನವನ್ನು ನೀಡಲಾಗುವುಉದ. ವಿಕೇಂದ್ರೀಕರಣದ ನಂತರ ರಾಜ್ಯಗಳು ಅನುಭವಿಸುವ ಆದಾಯ ಕೊರತೆಯ ಅಂತರವನ್ನು ನೀಗಿಸಲು 15ನೇ ಹಣಕಾಸು ಯೋಜನೆಯಡಿ ಶಿಫಾರಸ್ಸಿನಂತೆ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆಯೋಗ ಪಿಡಿಆರ್ ಡಿ ಅನುದಾನವನ್ನು 17 ರಾಜ್ಯಗಳಿಗೆ ಶಿಫಾರಸು ಮಾಡಿದೆ ಮತ್ತು ಅದನ್ನು ಪ್ರತಿ ತಿಂಗಳು ಕಂತಿನ ರೂಪದಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
2021-22ನೇ ಹಣಕಾಸು ವರ್ಷದಲ್ಲಿ ಕೊರತೆಯನ್ನು ಅಂದಾಜು ಮಾಡಿ, ರಾಜ್ಯಗಳ ಆದಾಯ ಮತ್ತು ವೆಚ್ಚ ಎರಡರ ನಡುವಿನ ಕೊರತೆಯ ಮೌಲ್ಯಮಾಪನ ಆಧರಿಸಿ ಆಯೋಗ ರಾಜ್ಯಗಳಿಗೆ ಅರ್ಹ ಅನುದಾನವನ್ನು ನಿರ್ಧರಿಸುತ್ತದೆ. 15ನೇ ಹಣಕಾಸು ಆಯೋಗ 2021-22ನೇ ಹಣಕಾಸು ವರ್ಷದಲ್ಲಿ 17 ರಾಜ್ಯಗಳಿಗೆ ಒಟ್ಟಾರೆ ವಿಕೇಂದ್ರೀಕರಣದ ನಂತರ 1,48,452 ಕೋಟಿ ರೂ. ಆದಾಯ ಕೊರತೆ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲು ಶಿಫಾರಸು ಮಾಡಿತ್ತು. ಆ ಪೈಕಿ 98,710 ಕೋಟಿ (ಶೇ.83.33) ರಷ್ಟನ್ನು ಈವರೆಗೆ ಬಿಡುಗಡೆ ಮಾಡಲಾಗಿದೆ.
15ನೇ ಹಣಕಾಸು ಆಯೋಗ ಆದಾಯ ಕೊರತೆ ಅನುದಾನ ಪಡೆಯಲು ಶಿಫಾರಸು ಮಾಡಿರುವ ರಾಜ್ಯಗಳೆಂದರೆ, ಆಂಧ್ರಪ್ರದೇಶ, ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ರಾಜಸ್ಥಾನ್, ಸಿಕ್ಕಿಂ, ತಮಿಳುನಾಡು, ತ್ರಿಪುರಾ, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.