ಬೆಂಗಳೂರು: ‘ಉತ್ತಮ ಆಡಳಿತ: ಸಾರ್ವತ್ರಿಕ ಧರ್ಮ” ಎಂಬ ವಿಷಯದ ಕುರಿತು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಆಯೋಜಿಸಿದ್ದ 49 ನೇ ಕಂಪನಿ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕೆಗಳು ಆರ್ಥಿಕವಾಗಿ ಬಲಿಷ್ಠಗೊಳ್ಳಲು ಕಂಪನಿ ಸೆಕ್ರೆಟರಿಗಳ ಪಾತ್ರ ಮಹತ್ವದ್ದಾಗಿದೆ . ಆದಾಯ ಗಳಿಕೆ ಪಾಪ-ಪುಣ್ಯಗಳಿಂದ ಬರುವುದಿಲ್ಲ. ನಮ್ಮ ಶ್ರಮ ಮತ್ತು ಚಾಕಚಕ್ಯತೆಯಿಂದ ಕೈಗಾರಿಕೆಗಳು ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ತರ್ಕಬದ್ಧ ಯೋಜನೆಗಳನ್ನು ರೂಪಿಸುವ ಮೂಲಕ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ಬಹುಮಾದರಿಯ ಪಾತ್ರವನ್ನು ವಹಿಸುವ ಮೂಲಕ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ಕಂಪನಿ ಸೆಕ್ರೆಟರಿಗಳ ಮೇಲಿರುತ್ತದೆ ಎಂದರು.
ಅರ್ಥವ್ಯವಸ್ಥೆ ಕಂಪನಿಗಳ ಆತ್ಮವಷ್ಟೇ ಅಲ್ಲ. ದೇಶದ ಆತ್ಮವೂ ಆಗಿದೆ. ಕೈಗಾರಿಕೆಗಳು ಆರ್ಥಿಕ ಪ್ರಗತಿ ಸಾಧಿಸಿದರೆ, ದೇಶವು ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ವರ್ಚುವಲ್ ಮೂಲಕ ಪಾಲ್ಗೊಂಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿ, ಕಾರ್ಪೊರೇಟ್ ವಲಯದ ಅಭಿವೃದ್ಧಿಗೆ ಉತ್ತಮ ಆಡಳಿತ ಮತ್ತು ಪಾರದರ್ಶಕತೆ ಮುಖ್ಯವಾಗಿದೆ. ಭಾರತವು ತನ್ನ ಬಲವಾದ ಕಾನೂನು ವ್ಯವಸ್ಥೆ ಮತ್ತು ಕಾರ್ಪೊರೇಟ್ ಆಡಳಿತದ ಉತ್ತಮ ಮಾನದಂಡಗಳಿಂದಾಗಿ ಜಾಗತಿಕ ಆರ್ಥಿಕತೆಯಲ್ಲಿ ವ್ಯಾಪಾರ ಮಾಡಲು ವಿಶ್ವಾಸಾರ್ಹ ಮತ್ತು ಸಮರ್ಥ ಸ್ಥಳವಾಗುವತ್ತ ಸ್ಥಿರವಾದ ಪ್ರಗತಿಯನ್ನು ಸಾಧಿಸುತ್ತಿದೆ ಎಂದು ಹೇಳಿದರು.
ಮುಖ್ಯಮಂತ್ರಿ @BSBommai ಅವರು ಇಂದು ಕಂಪನಿ ಸೆಕ್ರೆಟರಿಗಳ 49ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು.
ಐ.ಸಿ.ಎಸ್.ಐ ಅಧ್ಯಕ್ಷ ನಾಗೇಂದ್ರ ಡಿ.ರಾವ್, ಉಪಾಧ್ಯಕ್ಷ ದೇವೇಂದ್ರ ವಿ.ದೇಶಪಾಂಡೆ, ಕಾರ್ಯದರ್ಶಿ ಆಶಿಶ್ ಮೋಹನ್ ಮೊದಲಾದವರು ಉಪಸ್ಥಿತರಿದ್ದರು. pic.twitter.com/QexCOcCfnX
— CM of Karnataka (@CMofKarnataka) January 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.