ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವ ಬೃಹತ್ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ಟಾದ ಸಂಕೀರ್ಣದ ಕಟ್ಟಡವೊಂದು ಅನುಭವ ಮಂಟಪ ಎಂಬ ಹೆಸರನ್ನು ಪಡೆಯುವ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಈ ಬಗ್ಗೆ ರಾಷ್ಟ್ರಪತಿಯವರಿಗೆ ಮನವಿ ಮಾಡಿದ್ದು, ಇದಕ್ಕೆ ರಾಷ್ಟ್ರಪತಿಯವರು ಸಕಾರಾತ್ಮಕವಾದ ರೀತಿಯಲ್ಲಿ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
12ನೇ ಶತಮಾನದ ಬಸವಾದಿ ಶರಣರು ನಿರ್ಮಾಣ ಮಾಡಿದ ಅನುಭವ ಮಂಟಪ ಎಲ್ಲ ಜಾತಿ, ಜನಾಂಗ, ಸಮುದಾಯ ಮತ್ತು ಲಿಂಗಗಳಿಗೆ ಸಮಾನ ಪ್ರಾತಿನಿಧ್ಯವನ್ನು ನೀಡಿದೆ. ಈ ಮೂಲಕ ಪ್ರಜಾಪ್ರಭುತ್ವ ಮೌಲ್ಯವನ್ನು ತಳಮಟ್ಟದಿಂದ ಗಟ್ಟಿಗೊಳಿಸಿದೆ. ಹೀಗಾಗಿ ಅನುಭವ ಮಂಟಪದ ಹೆಸರನ್ನು ಸಂಸತ್ತಿನ ಕಟ್ಟಡವೊಂದಕ್ಕೆ ಇಡಬೇಕು ಎಂಬ ಮನವಿಯನ್ನು ಬಸವರಾಜ ಹೊರಟ್ಟಿ ಅವರು ರಾಷ್ಟ್ರಪತಿಯವರಿಗೆ ಮಾಡಿದ್ದಾರೆ.
ಇದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಿರುವ ರಾಷ್ಟ್ರಪತಿಗಳ ಕಚೇರಿ, ಕೇಂದ್ರ ಸರಕಾರದ ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿ ಅನುಭವ ಮಂಟಪ ಹೆಸರಿಡುವ ಕುರಿತು ಸೂಕ್ತ ರೀತಿಯಲ್ಲಿ ಪರಿಶೀಲಿಸುವ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.